ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.
ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…