ಚಿತ್ರ ಮಂಜರಿ

ʼಮ್ಯಾಕ್ಸ್‌ʼ ಹೆಸರಲ್ಲಿ ಆಂಬುಲೆನ್ಸ್‌ ಸೇವೆ ಆರಂಭಿಸಿದ ಕಿಚ್ಚನ ಅಭಿಮಾನಿಗಳು

ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.

ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್‌ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.

ಕಾಲಿವುಡ್‌ನ ಖ್ಯಾತ ಡೈರೆಕ್ಟರ್‌ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ.

ಮ್ಯಾಕ್ಸ್‌ ಚಿತ್ರದಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್‌, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು ನಿರ್ಮಾಪಕರಾಗಿದ್ದಾರೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago