ಚಿತ್ರ ಮಂಜರಿ

ಎಂಟು ಎಕರೆ ವ್ಯಾಪ್ತಿಯ ಫಾರ್ಮ್‌ ಹೌಸ್‌ ಖರೀದಿಸಿದ ಕೊಹ್ಲಿ-ಅನುಷ್ಕಾ

ನವದೆಹಲಿ: ಸದ್ಯ ಏಷ್ಯಾ ಕಪ್‌ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್‌ ಹೌಸ್‌ ಒಂದನ್ನು ಖರೀದಿಸಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್‌ ಹೌಸನ್ನು ಖರೀದಿ ಮಾಡಿದ್ದಾರೆ. ಇದರ ಪಕ್ಕದಲ್ಲೇ ದೀಪಿಕಾ ಪಡುಕೋಣೆ ಮತ್ತು ರಣ್ವೀರ್‌ ಸಿಂಗ್‌ ಕೂಡ ಈ ಹಿಂದೆ ಫಾರ್ಮ್‌ ಹೌಸ್‌ ಖರೀದಿಸಿದ್ದರು. ಅದ್ದೂರಿ ಕಾರುಗಳನ್ನು, ನಿವಾಸಗಳನ್ನು ಸ್ಟಾರ್‌ ದಂಪತಿಗಳು ಆಗಾಗ ಖರೀದಿಸುತ್ತಲೇ ಇರುತ್ತಾರೆ. ಇದೀಗ ಅಲಿಬಾಘ್‌ನ ರಿಯಲ್‌ ಎಸ್ಟೇಟ್‌ನಲ್ಲಿ ಕೊಹ್ಲಿ ದಂಪತಿ ಹೂಡಿಕೆ ಮಾಡಿದ್ದಾರೆ.

ಎಂಟು ಎಕರೆ ವ್ಯಾಪ್ತಿಯನ್ನು ಹೊಂದಿರುವ ಫಾರ್ಮ್‌ ಹೌಸ್‌ ಇದಾಗಿದ್ದು ಒಟ್ಟೂ ಮೌಲ್ಯ 19.24 ಕೋಟಿ ರೂಪಾಯಿಗಳಾಗಿದ್ದು, ರಿಜಿಸ್ಟ್ರೇಷನ್‌ಗೆಂದೇ ಕೊಹ್ಲಿ – ಅನುಷ್ಕಾ 1.15 ಕೋಟಿ ರೂ ಕಟ್ಟಿದ್ದಾರೆ. ಜತೆಗೆ ರೂ 3.35 ಲಕ್ಷ ಅಂಚೆ ಮೌಲ್ಯವನ್ನೂ ಪಾವತಿಸಿದ್ದಾರೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ತಿಳಿಸಿದೆ.
ಕಳೆದ ತಿಂಗಳು ಇದೇ ಪ್ರದೇಶದಲ್ಲಿ ರಣ್ವೀರ್‌ ಸಿಂಗ್‌ ಮತ್ತು ದೀಪಿಕಾ ಪಡುಕೋಣೆ ಫಾರ್ಮ್‌ ಹೌಸ್‌ ಗೃಹ ಪ್ರವೇಶ ಮಾಡಿದ್ದರು.

ಅನುಷ್ಕಾ ಶರ್ಮಾ ಸದ್ಯ ಚಕ್ದಾ ಎಕ್ಸ್‌ಪ್ರೆಸ್‌ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಇಂಗ್ಲೆಂಡಿನ ಲೀಡ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಕ್ದಾ ಎಕ್ಸ್‌ಪ್ರೆಸ್‌ ಭಾರತ ಮಹಿಳಾ ತಂಡದ ಮಾಜಿ ನಾಯಕಿ ಜೂನ್‌ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರವಾಗಿದೆ. ಇತ್ತೀಚೆಗಷ್ಟೇ ತಾಪ್ಸಿ ಪನ್ನು ಅವರು ಮಿಥಾಲಿ ರಾಜ್‌ ಅವರ ಜೀವನಾಧಾರಿತ ಶಭಾಷ್‌ ಮಿಥು ಚಿತ್ರ ಬಿಡುಗಡೆಯಾಗಿತ್ತು. ಚಕ್ದಾ ಎಕ್ಸ್‌ಪ್ರೆಸ್‌ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

 

andolana

Recent Posts

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

36 mins ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

48 mins ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

6 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

7 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

13 hours ago