ಚಿತ್ರ ಮಂಜರಿ

ಡೈರೆಕ್ಷನ್‌ ಮಾಡಲು ರೆಡಿಯಾದ ಲೇಡಿ ಸೂಪರ್‌ ಸ್ಟಾರ್‌

ಸೌತ್‌ ಸಿನಿ ರಂಗದ ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.

ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.

ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್‌ ಸ್ಟಾರ್‌ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್‌ ತಿಳಿಯಬೇಕಿದೆ.

ಇತ್ತೀಚೆಗೆಲೇಡಿ ಸೂಪರ್‌ ಸ್ಟಾರ್‌ ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.

ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.

lokesh

Recent Posts

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

1 hour ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

1 hour ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

2 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

3 hours ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

4 hours ago