ಸೌತ್ ಸಿನಿ ರಂಗದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.
ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.
ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್ ಸ್ಟಾರ್ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್ ತಿಳಿಯಬೇಕಿದೆ.
ಇತ್ತೀಚೆಗೆಲೇಡಿ ಸೂಪರ್ ಸ್ಟಾರ್ ಸೊಶಿಯಲ್ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.
ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.
ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.
ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…