ಚಿತ್ರ ಮಂಜರಿ

ಡೈರೆಕ್ಷನ್‌ ಮಾಡಲು ರೆಡಿಯಾದ ಲೇಡಿ ಸೂಪರ್‌ ಸ್ಟಾರ್‌

ಸೌತ್‌ ಸಿನಿ ರಂಗದ ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.

ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.

ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್‌ ಸ್ಟಾರ್‌ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್‌ ತಿಳಿಯಬೇಕಿದೆ.

ಇತ್ತೀಚೆಗೆಲೇಡಿ ಸೂಪರ್‌ ಸ್ಟಾರ್‌ ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.

ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

18 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago