ಸೌತ್ ಸಿನಿ ರಂಗದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.
ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.
ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್ ಸ್ಟಾರ್ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್ ತಿಳಿಯಬೇಕಿದೆ.
ಇತ್ತೀಚೆಗೆಲೇಡಿ ಸೂಪರ್ ಸ್ಟಾರ್ ಸೊಶಿಯಲ್ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.
ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.
ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.
ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…