ಚಿತ್ರ ಮಂಜರಿ

ಡೈರೆಕ್ಷನ್‌ ಮಾಡಲು ರೆಡಿಯಾದ ಲೇಡಿ ಸೂಪರ್‌ ಸ್ಟಾರ್‌

ಸೌತ್‌ ಸಿನಿ ರಂಗದ ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.

ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.

ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್‌ ಸ್ಟಾರ್‌ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್‌ ತಿಳಿಯಬೇಕಿದೆ.

ಇತ್ತೀಚೆಗೆಲೇಡಿ ಸೂಪರ್‌ ಸ್ಟಾರ್‌ ಸೊಶಿಯಲ್‌ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.

ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.

ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

1 min ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

14 mins ago

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

18 mins ago

ಓದುಗರ ಪತ್ರ | ಎಸ್‌ಐಆರ್ ಗೊಂದಲ ಪರಿಹರಿಸಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…

22 mins ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

18 hours ago