ಸೌತ್ ಸಿನಿ ರಂಗದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ.
ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.
ತಾವು ನಿರ್ದೇಶನ ಮಾಡುತ್ತಿರುವ ಸಿನಿಮಾ ಯಾವುದು.? ಅದರ ಕಥೆ ಏನು.? ಎಂಬುದರ ಕುರಿತು ನಯನ ತಾರಾ ಅವರು ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಲೇಡಿ ಸೂಪರ್ ಸ್ಟಾರ್ ನಿರ್ದೇಶನ ಮಾಡಲಿರುವ ಸಿನಿಮಾ ಬಗೆಗಿನ ಅಪ್ಡೇಟ್ಸ್ ತಿಳಿಯಬೇಕಿದೆ.
ಇತ್ತೀಚೆಗೆಲೇಡಿ ಸೂಪರ್ ಸ್ಟಾರ್ ಸೊಶಿಯಲ್ ಮೀಡಿಯಾದಲ್ಲಿ ಹಾಕಿದ್ದ ಫೋಟೊದಿಂದ ನಯನ ತಾರಾ ನಿರ್ದೇಶನದತ್ತ ಮುಖ ಮಾಡಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಈ ಫೋಟೋದಲ್ಲಿ ನಯನ ತಾರಾ ಅವರು ಕ್ಯಾಮೆರಾ ಹಿಂದೆ ನಿಂತಿದ್ದಾರೆ. ನಟಿ ಹಂಚಿಕೊಂಡಿರುವ ಈ ಒಂದು ಫೋಟೊದಿಂದ ಅಭಿಮಾನಿಗಳಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ.
ನಯನ ತಾರ ಅವರು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ. ತ್ರಿಶಾ, ಅನುಷ್ಕಾ ಶೆಟ್ಟಿ, ಸಮಂತಾ ಸೇರಿದಂತೆ ಇನ್ನೂ ಹಲವು ಜನ ಪ್ರಿಯ ನಟಿಯರಿಗೂ ಕೂಡ ನಯನ ತಾರ ಅವರು ಪಡೆಯುವ ಸಂಭಾವನೆಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.
ನಯನ ತಾರ ಅವರು ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸುತ್ತಾರೆ. ಎಂಬ ಸುದ್ದಿ ಹರಿದಾಡಿತ್ತು. ಆ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎನ್ನಲಾಗಿದೆ.
ನಿರ್ಮಾಣ ಸಂಸ್ಥೆಯು ಅಷ್ಟೊಂದು ಸಂಭಾವನೆ ನೀಡಲು ಒಪ್ಪದೇ ಇದ್ದುದ್ದರಿಂದ ನಟಿ ಮಣಿರತ್ನಂ ಅವರ ಸಿನಿಮಾದಿಂದ ಹಿಂದೆ ಸರಿದರು ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಹರಿದಾಡುತ್ತಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…