ಚಿತ್ರ ಮಂಜರಿ

ಲೀಡರ್‌ ರಾಮಯ್ಯ : ವಿಜಯ್‌ ಸೇತುಪತಿ ಡೇಟ್ಸ್‌ಗಾಗಿ ಕಾಯುತ್ತಿದೆ ಚಿತ್ರತಂಡ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‍ಗೆ ‘ಲೀಡರ್ ರಾಮಯ್ಯ’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ತೆರೆಗೆ ತರಲು ಪ್ಲ್ಯಾನ್ ಕೂಡ ಮಾಡಿಕೊಳ್ಳಲಾಗಿದೆ.

ಲೀಡರ್ ರಾಮಯ್ಯ ಟೈಟಲ್ ಜೊತೆಗೆ ಎ ಕಿಂಗ್ ರೈಸ್ಡ್ ಬೈ ದಿ ಪೀಪಲ್ ಎಂಬ ಟ್ಯಾಗ್ ಲೈನ್ ಒಳಗೊಂಡಿದೆ. ರಾಜ್ಯದ 24 ನೇ ಮುಖ್ಯಮಂತ್ರಿಯ ಜೀವನದ ಸುತ್ತ ಈ ಕತೆ ಸುತ್ತುತ್ತದೆ. ಸತ್ಯರತ್ನಂ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂಬುದು ಲೇಟೆಸ್ಟ್ ಡೆವಲಪ್ ಮೆಂಟ್.

ಆಗಸ್ಟ್‌ ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕರು ಸಿದ್ಧತೆಯಲ್ಲಿದ್ದಾರೆ. ತಮಿಳು ನಟ ವಿಜಯ್ ಸೇತುಪತಿಯನ್ನು ಕರೆತರಲು ಬಹಳ ಉತ್ಸುಕರಾಗಿರುವ ಚಿತ್ರದ ನಿರ್ಮಾಪಕರು ಅವರನ್ನು ಈಗಾಗಲೇ ಸಂಪರ್ಕಿಸಿದ್ದಾರೆ. ತಂಡದ ಮಾಹಿತಿ ಪ್ರಕಾರ, ವಿಜಯ್ ಸೇತುಪತಿ ಈ ಚಿತ್ರದಲ್ಲಿ ನಟಿಸಲು ಹಸಿರು ನಿಶಾನೆ ತೋರಿಸಿದ್ದಾರೆ, ಸೇತು ಪತಿ ಅವರ ಡೇಟ್ಸ್ ಗಾಗಿ ಕಾಯಲು ಪ್ರೊಡಕ್ಷನ್ ಹೌಸ್ ಸಿದ್ಧವಾಗಿದೆ. ಸಿದ್ದರಾಮಯ್ಯನವರ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದು, ವಕೀಲರಾಗಿ ವೃತ್ತಿ ಪ್ರಯಾಣ ಆರಂಭಿಸಿದಾಗಿನಿಂದ ಕಥೆ ಪ್ರಾರಂಭವಾಗಲಿದೆ. ಈ ಬಯೋಪಿಕ್ಸ್ ನಲ್ಲಿ 20 ರಿಂದ 30 ನಿಮಿಷಗಳಲ್ಲಿ ಸಿಎಂ ಸಿದ್ದರಾಮಯ್ಯ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಬಯೋಪಿಕ್ ನ ಮೊದಲು ಭಾಗ 1 ರಲ್ಲಿ ಸಿದ್ಧರಾಮಯ್ಯ ಅವರ ಬೆಳವಣಿಗೆಯ ಬಾಲ್ಯದ ದಿನಗಳು ಮತ್ತು ಪ್ರೌಢಾವಸ್ಥೆಯ ಪ್ರಯಾಣ ತಿಳಿಸುತ್ತದೆ. ಸಿದ್ಧರಾಮಯ್ಯ ಅವರ ಕಿರಿಯ ಆವೃತ್ತಿಯನ್ನು ನಿರ್ವಹಿಸುವ ಯುವ ನಟನ ಹುಡುಕಾಟದಲ್ಲಿದ್ದಾರೆ. ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರೆ.

ನಾಯಕಿಯರ ಫೈನಲ್ ಆದಾಗ ಉಳಿದ ಕಲಾವಿದರ ಘೋಷಣೆ ಮಾಡಲಾಗುತ್ತದೆ. ಪ್ರಾಜೆಕ್ಟ್ ನ ಭಾಗವಾಗಿ ಕನ್ನಡದಿಂದ ಕೆಲವು ಸೂಪರ್‍ ಸ್ಟಾರ್‌ ಗಳನ್ನು ಕರೆತರಲು ನಿರ್ದೇಶಕರು ಚಿಂತಿಸುತ್ತಿದ್ದು, ಈ ಸಂಬಂಧ ಈಗಾಗಲೇ ಹಲವು ನಟರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಲೀಡರ್ ರಾಮಯ್ಯ ಸಿನಿಮಾಗೆ ಶಶಾಂಕ್ ಶೇಷಗಿರಿ ಸಂಗೀತ ನೀಡಲಿದ್ದಾರೆ. ಸಿನಿಮಾದ ಮೊದಲ ಭಾಗದಲ್ಲಿ 3 ರಿಂದ 4 ಹಾಡುಗಳನ್ನು ಹೊರತರಲು ಗಾಯಕ-ಸಂಗೀತ ನಿರ್ದೇಶಕರು ಕೆಲಸ ಮಾಡುತ್ತಿದ್ದಾರೆ. ಅವರು ಈಗಾಗಲೇ ಗಾಯಕ ಹರಿಚರಣ್ ಅವರಿಂದ ಒಂದು ಹಾಡನ್ನು ರೆಕಾರ್ಡ್ ಮಾಡಿಸಿದ್ದಾರೆ.

ಇದು ಶಶಾಂಕ್ ಅವರ ನಾಲ್ಕನೇ ಪ್ರಾಜೆಕ್ಟ್ ಆಗಿದ್ದು, ಅವರು ಈ ಹಿಂದೆ ಉಪ್ಪು ಹುಳಿ ಖಾರ, ರಾಂಧವ ಮತ್ತು ಗೌಳಿಯಲ್ಲಿ ಕೆಲಸ ಮಾಡಿದ್ದಾರೆ. ಹಯತ್ ಪೀರಾ ಮತ್ತು ಚನ್ನಪ್ಪ ಹಾಲಳ್ಳಿ ಜಂಟಿಯಾಗಿ ಸಿನಿಮಾ ನಿರ್ಮಿಸಿದ್ದಾರೆ. ಉದಯ್ ಲೀಲಾ ಚಿತ್ರದ ಛಾಯಾಗ್ರಾಹಕರಾಗಿದ್ದಾರೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

10 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

10 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

11 hours ago