ಚಿತ್ರ ಮಂಜರಿ

ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ: ಕನ್ನಡ ಯೂಟ್ಯೂಬ್​ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕಾಶ್ ರಾಜ್ (58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವಿಡಿಯೊಗಳನ್ನು ಹರಿಬಿಟ್ಟಿರುವ ಯೂಟ್ಯೂಬ್‌ನ ‘ವಿಕ್ರಮ್ ಟಿ.ವಿ’ ಚಾನೆಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟ ಹಾಗೂ ನಿರ್ದೇಶಕನಾಗಿರುವ ನಾನು, ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ–ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ.14ರಂದು ವಿಕ್ರಮ್ ಟಿ.ವಿ. ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೊದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು ಎಂದು ಪ್ರಕಾಶ್ ರಾಜ್ ದೂರಿನಲ್ಲಿ ತಿಳಿಸಿದ್ದಾರೆ.

ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು…? ಸನಾತನ ಧರ್ಮ/ಹಿಂದೂಗಳೇ ಮಲಗೇ ಇರ್ತಿರಾ…? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ.

ಇದೇ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ. ಇಂಥ ವಿಡಿಯೊ ಮಾಡಿರುವ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಟ ಪ್ರಕಾಶ್​ ರಾಜ್​ ದೂರಿನ ಆಧಾರದಲ್ಲಿ ಅಶೋಕನಗರ ಪೊಲೀಸರು ಜೀವ ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆ ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ತನಿಖೆ ಪ್ರಾರಂಭಿಸಿದ್ದಾರೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

20 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago