ಚಿತ್ರ ಮಂಜರಿ

ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ: ಕನ್ನಡ ಯೂಟ್ಯೂಬ್​ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕಾಶ್ ರಾಜ್ (58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವಿಡಿಯೊಗಳನ್ನು ಹರಿಬಿಟ್ಟಿರುವ ಯೂಟ್ಯೂಬ್‌ನ ‘ವಿಕ್ರಮ್ ಟಿ.ವಿ’ ಚಾನೆಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟ ಹಾಗೂ ನಿರ್ದೇಶಕನಾಗಿರುವ ನಾನು, ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ–ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ.14ರಂದು ವಿಕ್ರಮ್ ಟಿ.ವಿ. ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೊದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು ಎಂದು ಪ್ರಕಾಶ್ ರಾಜ್ ದೂರಿನಲ್ಲಿ ತಿಳಿಸಿದ್ದಾರೆ.

ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು…? ಸನಾತನ ಧರ್ಮ/ಹಿಂದೂಗಳೇ ಮಲಗೇ ಇರ್ತಿರಾ…? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ.

ಇದೇ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ. ಇಂಥ ವಿಡಿಯೊ ಮಾಡಿರುವ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಟ ಪ್ರಕಾಶ್​ ರಾಜ್​ ದೂರಿನ ಆಧಾರದಲ್ಲಿ ಅಶೋಕನಗರ ಪೊಲೀಸರು ಜೀವ ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆ ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ತನಿಖೆ ಪ್ರಾರಂಭಿಸಿದ್ದಾರೆ.

andolanait

Recent Posts

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

7 mins ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

3 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

3 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

6 hours ago