ಚಿತ್ರ ಮಂಜರಿ

ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ: ಕನ್ನಡ ಯೂಟ್ಯೂಬ್​ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕಾಶ್ ರಾಜ್ (58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವಿಡಿಯೊಗಳನ್ನು ಹರಿಬಿಟ್ಟಿರುವ ಯೂಟ್ಯೂಬ್‌ನ ‘ವಿಕ್ರಮ್ ಟಿ.ವಿ’ ಚಾನೆಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟ ಹಾಗೂ ನಿರ್ದೇಶಕನಾಗಿರುವ ನಾನು, ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ–ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ.14ರಂದು ವಿಕ್ರಮ್ ಟಿ.ವಿ. ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೊದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು ಎಂದು ಪ್ರಕಾಶ್ ರಾಜ್ ದೂರಿನಲ್ಲಿ ತಿಳಿಸಿದ್ದಾರೆ.

ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು…? ಸನಾತನ ಧರ್ಮ/ಹಿಂದೂಗಳೇ ಮಲಗೇ ಇರ್ತಿರಾ…? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ.

ಇದೇ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ. ಇಂಥ ವಿಡಿಯೊ ಮಾಡಿರುವ ವಿಕ್ರಮ್ ಟಿ.ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಟ ಪ್ರಕಾಶ್​ ರಾಜ್​ ದೂರಿನ ಆಧಾರದಲ್ಲಿ ಅಶೋಕನಗರ ಪೊಲೀಸರು ಜೀವ ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆ ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ತನಿಖೆ ಪ್ರಾರಂಭಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago