ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಈಡಿಗ ಸಮುದಾಯದ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಾರ್ಲಿಮೆಂಟಿಗೆ ತಯಾರಿಯಾಗಲು ಶಿವಣ್ಣಗೆ ಹೇಳಿದ್ದೇನೆ. ಅವರು ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಿದರೂ ಟಿಕೆಟ್ ನೀಡುವುದಾಗಿ ಹೇಳಿರುವುದಾಗಿ ತಿಳಿಸಿದರು.
ಆದರೆ, ಶಿವಣ್ಣ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಅವುಗಳ ಚಿತ್ರೀಕರಣ ಮುಗಿಯಬೇಕು ಎಂದಿದ್ದಾರೆ. ಚಿತ್ರ ಯವಾಗದರೂ ಮಾಡಬಹುದು, ಆದರೆ ಪಾರ್ಲಿಮೆಂಟ್ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ ಎಂದು ಹೇಳಿದ್ದೇನೆ. ಅವರ ನಿರ್ಧಾರಕ್ಕೆ ಎದುರು ನೋಡುತ್ತಿದ್ದೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯ ನೀಡಿದ ನಟ ಶಿವರಾಜ್ ಕುಮಾರ್, ನಮ್ಮದೇನಿದ್ದರೂ ಮೇಕಪ್ ಹಾಕೋದು ಸಿನಿಮಾ ಮಾಡೋದು. ನಾನು ಎಂದಿಗೂ ರಾಜಕೀಯಕ್ಕೆ ಬರೋಲ್ಲ. ನಮ್ಮ ತಂದೆ ಬಣ್ಣ ಹಚ್ಚಿ ನಟನೆ ಮಾಡುವುದನ್ನು ಕೇಳಿ ಕೊಟ್ಟಿದ್ದಾರೆ. ಅದೇ ಸಾಕು ನಮಗೆ. ನಮ್ಮ ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ರಾಜಕೀಯ ನಮಗೆ ಬೇಡ.
ಆದರೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗಳು ನಮ್ಮನೆ ಸೊಸೆಯಾಗಿದ್ದಾರೆ. ಗೀತಾ ಬೇಕಾದ್ರೆ ರಾಜಕೀಯಕ್ಕೆ ಹೋಗಲಿ, ಹೆಂಡತಿ ಇಷ್ಟಪಟ್ಟರೆ ಅವರಿಗೆ ಸಪೋರ್ಟ್ ಮಾಡೋದು ಗಂಡನ ಕೆಲಸ. ಅವರು ಚುನಾವಣೆಗೆ ನಿಲ್ಲುತ್ತಾರೆಂದರೆ ಅವರ ಹಿಂದೆ ನಿಂತು ಬೆಂಬಲ ಕೊಡುತ್ತೇನೆ ಎಂದು ಶಿವಣ್ಣ ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…