ಚಿತ್ರ ಮಂಜರಿ

ಖ್ಯಾತ ಕಿರುತರೆ ನಟ ಲೋಕೇಶ್ ರಾಜೇಂದ್ರನ್ ಇನ್ನಿಲ್ಲ

ಚೆನ್ನೈ : ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಸಾವಿಗೆ ಶರಣಾಗಿದ್ದಾರೆ.

34 ವರ್ಷದ ಲೋಕೇಶ್ ರಾಜೇಂದ್ರನ್ ಅವರು ವೈವಾಹಿಕ ಜೀವನದ ಸಮಸ್ಯೆಯಿಂದಾಗಿ ಪತ್ನಿ ಜೊತೆ ಮನಸ್ತಾಪ ಉಂಟಾಗಿತ್ತು. ನಾಲ್ಕು ದಿನಗಳ ಹಿಂದೆ ಇವರ ಪತ್ನಿ ಡಿವೋರ್ಸ್ ಗಾಗಿ ಲೀಗಲ್ ನೋಟಿಸ್ ಕಳುಹಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಮದ್ಯ ವ್ಯಸನಿಯಾಗಿದ್ದು  ಹಲವು ಬಾರಿ ಚೆನ್ನೈನ ಬಸ್ ನಿಲ್ದಾಣಗಳಲ್ಲಿ ಮಲಗುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿದ್ದರು. ಸೋಮವಾರ ಬಸ್ ನಿಲ್ದಾಣದಲ್ಲಿ ಲೋಕೇಶ್ ರಾಜೇಂದ್ರನ್ ಅವರು ತೀವ್ರ ಅಸ್ವಸ್ಥರಾಗಿದ್ದನ್ನು ಕಂಡು ಕೆಲವರು 108ಕ್ಕೆ ಕರೆ ಮಾಡಿ ಪೊಲೀಸ್ರಿಗೂ ಮಾಹಿತಿ ನೀಡಿದರು. ಬಳಿಕ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಲೋಕೇಶ್ ರಾಜೇಂದ್ರನ್ ಅವರು ಸುಮಾರು 150ಕ್ಕೂ ಅಧಿಕ ತಮಿಳು ಧಾರಾವಾಹಿ ಮತ್ತು 15 ಸಿನಿಮಾಗಳಲ್ಲಿ ನಟಿಸಿದ್ದರು. ಇವರ ನಿಧನಕ್ಕೆ ಕಿರುತೆರೆಯ ಕಲಾವಿದರು, ಅಭಿಮಾನಿಗಳ ಬಳಗ ಕಂಬನಿ ಮಿಡಿದಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago