ಚಿತ್ರ ಮಂಜರಿ

ಖ್ಯಾತ ಕಿರುತರೆ ನಟ ಲೋಕೇಶ್ ರಾಜೇಂದ್ರನ್ ಇನ್ನಿಲ್ಲ

ಚೆನ್ನೈ : ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಸಾವಿಗೆ ಶರಣಾಗಿದ್ದಾರೆ.

34 ವರ್ಷದ ಲೋಕೇಶ್ ರಾಜೇಂದ್ರನ್ ಅವರು ವೈವಾಹಿಕ ಜೀವನದ ಸಮಸ್ಯೆಯಿಂದಾಗಿ ಪತ್ನಿ ಜೊತೆ ಮನಸ್ತಾಪ ಉಂಟಾಗಿತ್ತು. ನಾಲ್ಕು ದಿನಗಳ ಹಿಂದೆ ಇವರ ಪತ್ನಿ ಡಿವೋರ್ಸ್ ಗಾಗಿ ಲೀಗಲ್ ನೋಟಿಸ್ ಕಳುಹಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಮದ್ಯ ವ್ಯಸನಿಯಾಗಿದ್ದು  ಹಲವು ಬಾರಿ ಚೆನ್ನೈನ ಬಸ್ ನಿಲ್ದಾಣಗಳಲ್ಲಿ ಮಲಗುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿದ್ದರು. ಸೋಮವಾರ ಬಸ್ ನಿಲ್ದಾಣದಲ್ಲಿ ಲೋಕೇಶ್ ರಾಜೇಂದ್ರನ್ ಅವರು ತೀವ್ರ ಅಸ್ವಸ್ಥರಾಗಿದ್ದನ್ನು ಕಂಡು ಕೆಲವರು 108ಕ್ಕೆ ಕರೆ ಮಾಡಿ ಪೊಲೀಸ್ರಿಗೂ ಮಾಹಿತಿ ನೀಡಿದರು. ಬಳಿಕ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಲೋಕೇಶ್ ರಾಜೇಂದ್ರನ್ ಅವರು ಸುಮಾರು 150ಕ್ಕೂ ಅಧಿಕ ತಮಿಳು ಧಾರಾವಾಹಿ ಮತ್ತು 15 ಸಿನಿಮಾಗಳಲ್ಲಿ ನಟಿಸಿದ್ದರು. ಇವರ ನಿಧನಕ್ಕೆ ಕಿರುತೆರೆಯ ಕಲಾವಿದರು, ಅಭಿಮಾನಿಗಳ ಬಳಗ ಕಂಬನಿ ಮಿಡಿದಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago