ಚಿತ್ರ ಮಂಜರಿ

ಅಲ್ಲಿ ತಮಿಳು ಜನರಿದ್ದರು ತಮಿಳು ಮಾತನಾಡಿದೆ ಕ್ಷಮಿಸಿ ಎಂದ ಲೂಸ್‌ ಮಾದ ಯೋಗಿ

ನಿನ್ನೆ ಕನ್ನಡದ ರೋಸಿ ಸಿನಿಮಾದ ಪೋಸ್ಟರ್‌ ಒಂದು ಬಿಡುಗಡೆಯಾಗಿದೆ. ಲೂಸ್‌ ಮಾದ ಯೋಗಿ ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ತಮಿಳಿನ ಕೊರಿಯೋಗ್ರಫರ್‌ ಸ್ಯಾಂಡಿ ಮಾಸ್ಟರ್‌ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಡ್‌ ಬುಷ್‌ ಖ್ಯಾತಿಯ ನಿರ್ದೇಶಕ ಶೂನ್ಯ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದ ಸ್ಯಾಂಡಿ ಮಾಸ್ಟರ್‌ರ ಪಾತ್ರದ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ನಟ ಲೂಸ್‌ ಮಾದ ಯೋಗಿ ಸಹ ಭಾಗವಹಿಸಿದ್ದರು. ಹೀಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ತಮಿಳಿನಲ್ಲಿ ಭಾಷಣವನ್ನು ಮಾಡಿದ್ದಾರೆ ಎಂಬ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನು ಹಂಚಿಕೊಳ್ಳಲಾರಂಭಿಸಿದ ಕನ್ನಡಿಗರು ಯೋಗಿ ವಿರುದ್ಧ ಬರಹಗಳನ್ನು ಬರೆದುಕೊಂಡು ಆಕ್ರೋಶ ಹೊರಹಾಕಿದರು, ಯೋಗಿ ನಟನೆಯ ಚಿತ್ರಗಳನ್ನು ನೋಡಬೇಡಿ ಎಂದು ಕರೆಯನ್ನು ನೀಡಿದರು. ಹೀಗೆ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೂಸ್‌ ಮಾದ ಯೋಗಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದದ ಬಗ್ಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

“ನಿನ್ನೆ ರೋಸಿ ಸಿನಿಮಾದ ಒಂದು ಪೋಸ್ಟರ್ ಲಾಂಚ್ ಮಾಡಿದೆ. ಆ ಒಂದು ಜಾಗದಲ್ಲಿ ತಮಿಳು ಮಾತಾಡಿದ್ದೀನಿ ಅಂತ ಸಾಕಷ್ಟು ಜನರಿಗೆ ಬೇಜಾರಾಗಿದೆ. ನಿಜ ಏನು ಅಂದರೆ, ನಾನು ಕನ್ನಡದಲ್ಲಿ ಶುರು ಮಾಡಿ, ತಮಿಳಿನಲ್ಲಿ ಮಾತಾಡಿ ಕನ್ನಡದಲ್ಲಿಯೇ ಮುಗಿಸಿದ್ದೇನೆ” ಎಂದು ಹೇಳಿಕೆಯನ್ನು ನೀಡಿದ್ದಾರೆ.

“ಆದರೂ ಕೂಡ ತುಂಬಾ ಜನಕ್ಕೆ ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾರಿಗೂ ಅವಮಾನ ಮಾಡಬೇಕು ಅಂತ ಆಗಲಿ. ಬೇಜಾರು ಮಾಡಬೇಕು ಅಂತಾಗಲಿ ಅಂತ ನಾನು ತಮಿಳನ್ನು ಉಪಯೋಗಿಸಲಿಲ್ಲ. ಅಲ್ಲಿ ಸಾಕಷ್ಟು ಜನ ತಮಿಳಿನವರು ಇದ್ದರು. ಹಾಗಾಗಿ ತಮಿಳು ಮಾತಾಡಿದೆ” ಎಂದು ಕ್ಷಮೆಯಾಚಿಸಿದ್ದಾರೆ.

andolana

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago