ಚಿತ್ರ ಮಂಜರಿ

ಅಲ್ಲಿ ತಮಿಳು ಜನರಿದ್ದರು ತಮಿಳು ಮಾತನಾಡಿದೆ ಕ್ಷಮಿಸಿ ಎಂದ ಲೂಸ್‌ ಮಾದ ಯೋಗಿ

ನಿನ್ನೆ ಕನ್ನಡದ ರೋಸಿ ಸಿನಿಮಾದ ಪೋಸ್ಟರ್‌ ಒಂದು ಬಿಡುಗಡೆಯಾಗಿದೆ. ಲೂಸ್‌ ಮಾದ ಯೋಗಿ ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ತಮಿಳಿನ ಕೊರಿಯೋಗ್ರಫರ್‌ ಸ್ಯಾಂಡಿ ಮಾಸ್ಟರ್‌ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಡ್‌ ಬುಷ್‌ ಖ್ಯಾತಿಯ ನಿರ್ದೇಶಕ ಶೂನ್ಯ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದ ಸ್ಯಾಂಡಿ ಮಾಸ್ಟರ್‌ರ ಪಾತ್ರದ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ನಟ ಲೂಸ್‌ ಮಾದ ಯೋಗಿ ಸಹ ಭಾಗವಹಿಸಿದ್ದರು. ಹೀಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ತಮಿಳಿನಲ್ಲಿ ಭಾಷಣವನ್ನು ಮಾಡಿದ್ದಾರೆ ಎಂಬ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನು ಹಂಚಿಕೊಳ್ಳಲಾರಂಭಿಸಿದ ಕನ್ನಡಿಗರು ಯೋಗಿ ವಿರುದ್ಧ ಬರಹಗಳನ್ನು ಬರೆದುಕೊಂಡು ಆಕ್ರೋಶ ಹೊರಹಾಕಿದರು, ಯೋಗಿ ನಟನೆಯ ಚಿತ್ರಗಳನ್ನು ನೋಡಬೇಡಿ ಎಂದು ಕರೆಯನ್ನು ನೀಡಿದರು. ಹೀಗೆ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೂಸ್‌ ಮಾದ ಯೋಗಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದದ ಬಗ್ಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

“ನಿನ್ನೆ ರೋಸಿ ಸಿನಿಮಾದ ಒಂದು ಪೋಸ್ಟರ್ ಲಾಂಚ್ ಮಾಡಿದೆ. ಆ ಒಂದು ಜಾಗದಲ್ಲಿ ತಮಿಳು ಮಾತಾಡಿದ್ದೀನಿ ಅಂತ ಸಾಕಷ್ಟು ಜನರಿಗೆ ಬೇಜಾರಾಗಿದೆ. ನಿಜ ಏನು ಅಂದರೆ, ನಾನು ಕನ್ನಡದಲ್ಲಿ ಶುರು ಮಾಡಿ, ತಮಿಳಿನಲ್ಲಿ ಮಾತಾಡಿ ಕನ್ನಡದಲ್ಲಿಯೇ ಮುಗಿಸಿದ್ದೇನೆ” ಎಂದು ಹೇಳಿಕೆಯನ್ನು ನೀಡಿದ್ದಾರೆ.

“ಆದರೂ ಕೂಡ ತುಂಬಾ ಜನಕ್ಕೆ ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾರಿಗೂ ಅವಮಾನ ಮಾಡಬೇಕು ಅಂತ ಆಗಲಿ. ಬೇಜಾರು ಮಾಡಬೇಕು ಅಂತಾಗಲಿ ಅಂತ ನಾನು ತಮಿಳನ್ನು ಉಪಯೋಗಿಸಲಿಲ್ಲ. ಅಲ್ಲಿ ಸಾಕಷ್ಟು ಜನ ತಮಿಳಿನವರು ಇದ್ದರು. ಹಾಗಾಗಿ ತಮಿಳು ಮಾತಾಡಿದೆ” ಎಂದು ಕ್ಷಮೆಯಾಚಿಸಿದ್ದಾರೆ.

andolana

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago