ಚಿತ್ರ ಮಂಜರಿ

ಅಲ್ಲಿ ತಮಿಳು ಜನರಿದ್ದರು ತಮಿಳು ಮಾತನಾಡಿದೆ ಕ್ಷಮಿಸಿ ಎಂದ ಲೂಸ್‌ ಮಾದ ಯೋಗಿ

ನಿನ್ನೆ ಕನ್ನಡದ ರೋಸಿ ಸಿನಿಮಾದ ಪೋಸ್ಟರ್‌ ಒಂದು ಬಿಡುಗಡೆಯಾಗಿದೆ. ಲೂಸ್‌ ಮಾದ ಯೋಗಿ ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ತಮಿಳಿನ ಕೊರಿಯೋಗ್ರಫರ್‌ ಸ್ಯಾಂಡಿ ಮಾಸ್ಟರ್‌ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಡ್‌ ಬುಷ್‌ ಖ್ಯಾತಿಯ ನಿರ್ದೇಶಕ ಶೂನ್ಯ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದ ಸ್ಯಾಂಡಿ ಮಾಸ್ಟರ್‌ರ ಪಾತ್ರದ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ನಟ ಲೂಸ್‌ ಮಾದ ಯೋಗಿ ಸಹ ಭಾಗವಹಿಸಿದ್ದರು. ಹೀಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ತಮಿಳಿನಲ್ಲಿ ಭಾಷಣವನ್ನು ಮಾಡಿದ್ದಾರೆ ಎಂಬ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನು ಹಂಚಿಕೊಳ್ಳಲಾರಂಭಿಸಿದ ಕನ್ನಡಿಗರು ಯೋಗಿ ವಿರುದ್ಧ ಬರಹಗಳನ್ನು ಬರೆದುಕೊಂಡು ಆಕ್ರೋಶ ಹೊರಹಾಕಿದರು, ಯೋಗಿ ನಟನೆಯ ಚಿತ್ರಗಳನ್ನು ನೋಡಬೇಡಿ ಎಂದು ಕರೆಯನ್ನು ನೀಡಿದರು. ಹೀಗೆ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೂಸ್‌ ಮಾದ ಯೋಗಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದದ ಬಗ್ಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

“ನಿನ್ನೆ ರೋಸಿ ಸಿನಿಮಾದ ಒಂದು ಪೋಸ್ಟರ್ ಲಾಂಚ್ ಮಾಡಿದೆ. ಆ ಒಂದು ಜಾಗದಲ್ಲಿ ತಮಿಳು ಮಾತಾಡಿದ್ದೀನಿ ಅಂತ ಸಾಕಷ್ಟು ಜನರಿಗೆ ಬೇಜಾರಾಗಿದೆ. ನಿಜ ಏನು ಅಂದರೆ, ನಾನು ಕನ್ನಡದಲ್ಲಿ ಶುರು ಮಾಡಿ, ತಮಿಳಿನಲ್ಲಿ ಮಾತಾಡಿ ಕನ್ನಡದಲ್ಲಿಯೇ ಮುಗಿಸಿದ್ದೇನೆ” ಎಂದು ಹೇಳಿಕೆಯನ್ನು ನೀಡಿದ್ದಾರೆ.

“ಆದರೂ ಕೂಡ ತುಂಬಾ ಜನಕ್ಕೆ ನೋವಾಗಿದ್ದರೆ ದಯವಿಟ್ಟು ಕ್ಷಮೆ ಇರಲಿ. ನಾನು ಯಾರಿಗೂ ಅವಮಾನ ಮಾಡಬೇಕು ಅಂತ ಆಗಲಿ. ಬೇಜಾರು ಮಾಡಬೇಕು ಅಂತಾಗಲಿ ಅಂತ ನಾನು ತಮಿಳನ್ನು ಉಪಯೋಗಿಸಲಿಲ್ಲ. ಅಲ್ಲಿ ಸಾಕಷ್ಟು ಜನ ತಮಿಳಿನವರು ಇದ್ದರು. ಹಾಗಾಗಿ ತಮಿಳು ಮಾತಾಡಿದೆ” ಎಂದು ಕ್ಷಮೆಯಾಚಿಸಿದ್ದಾರೆ.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago