ನಿರ್ದೇಶಕ ಶಶಾಂಕ್ ಅವರ ನಿರ್ದೇಶನದ ಉತ್ತಮ ಕಂಟೆಂಟ್ ಉಳ್ಳ ‘ಲವ್ 360’ ಚಿತ್ರ ಆಗಸ್ಟ್ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.
ತೆಲುಗು ಮತ್ತು ತಮಿಳಿನಲ್ಲಿ ‘ಲವ್ 360’ ಸಿನಿಮಾವನ್ನು ರಿಮೇಕ್ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್ ಅವರು ‘ಲವ್ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್ ಮತ್ತು ಹೊಸ ಹೀರೋ ಪ್ರವೀಣ್ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.
‘ಲವ್ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್ ಮಾಡಲು ಮುಂದೆ ಬಂದಿದ್ದಾರೆ.
ನಿರ್ದೇಶಕ ಶಶಾಂತ್ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್ ಮಣಿ, ಸುಜಿತ್, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…