ನಿರ್ದೇಶಕ ಶಶಾಂಕ್ ಅವರ ನಿರ್ದೇಶನದ ಉತ್ತಮ ಕಂಟೆಂಟ್ ಉಳ್ಳ ‘ಲವ್ 360’ ಚಿತ್ರ ಆಗಸ್ಟ್ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.
ತೆಲುಗು ಮತ್ತು ತಮಿಳಿನಲ್ಲಿ ‘ಲವ್ 360’ ಸಿನಿಮಾವನ್ನು ರಿಮೇಕ್ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್ ಅವರು ‘ಲವ್ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್ ಮತ್ತು ಹೊಸ ಹೀರೋ ಪ್ರವೀಣ್ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.
‘ಲವ್ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್ ಮಾಡಲು ಮುಂದೆ ಬಂದಿದ್ದಾರೆ.
ನಿರ್ದೇಶಕ ಶಶಾಂತ್ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್ ಮಣಿ, ಸುಜಿತ್, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.
ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…