ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago