ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

6 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

6 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago