ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

58 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

1 hour ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

4 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

7 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

7 hours ago