ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

7 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

9 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

11 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

12 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

13 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

13 hours ago