ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

19 mins ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

1 hour ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

1 hour ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

1 hour ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago