ಚಿತ್ರ ಮಂಜರಿ

ತಮಿಳು ತೆಲುಗುವಿನಲ್ಲಿ ರಿಮೇಕ್‌ ಆಗಲಿದೆ ಲವ್‌ 360 ಸಿನಿಮಾ

ನಿರ್ದೇಶಕ ಶಶಾಂಕ್​ ಅವರ ನಿರ್ದೇಶನದ ಉತ್ತಮ ಕಂಟೆಂಟ್​ ಉಳ್ಳ ‘ಲವ್​ 360’ ಚಿತ್ರ  ಆಗಸ್ಟ್​ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ತೆಲುಗು ಮತ್ತು ತಮಿಳಿನಲ್ಲಿ ‘ಲವ್​ 360’ ಸಿನಿಮಾವನ್ನು ರಿಮೇಕ್​ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್​ ಅವರು ‘ಲವ್​ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್​ ಮತ್ತು ಹೊಸ ಹೀರೋ ಪ್ರವೀಣ್​ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

‘ಲವ್​ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್​ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್​ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್​ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್​ ಮಾಡಲು ಮುಂದೆ ಬಂದಿದ್ದಾರೆ.

ನಿರ್ದೇಶಕ ಶಶಾಂತ್​ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್​ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್​ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್​ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್​ ಮಣಿ, ಸುಜಿತ್​, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.

 

andolana

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

40 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago