ಚಿತ್ರ ಮಂಜರಿ

ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ಸರಿಯಾಗಿ ನಡೆಯಲಿಲ್ಲ : ಡೆತ್ ನೋಟ್ ಬರೆದಿಟ್ಟು ನಟಿ ಸಾವಿಗೆ ಶರಣು

ಚೆನ್ನೈ :ಇತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಯುವ ನಟಿಯರು ಸಾವಿಗೆ ಶರಣಾಗುತ್ತಿರುವುದು ಚಿತ್ರರಂಗ ವಲಯದಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಕಾಲಿವುಡ್ ಯುವ ನಟಿ ದೀಪಾ ಅಲಿಯಾಸ್ ಪಾಲಿನ್ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಖಾಸಗಿ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ದೀಪಾ ಶನಿವಾರದಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ದೀಪಾ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ನೇಹಿತರು ತಿಳಿಸಿದ್ದಾರೆ. ಶನಿವಾರ ನಟಿ ದೀಪಾ ಕುಟುಂಬಸ್ಥರ ಫೋನ್ ರಿಸೀವ್​​ ಮಾಡಿರಲಿಲ್ಲ. ಬಳಿಕ ಕುಟುಂಬಸ್ಥರು ದೀಪಾ ಅವರ ಸ್ನೇಹಿತ ಪ್ರಭಾಕರನ್​​ ಅವರಿಗೆ ಕರೆ ಮಾಡಿದ್ದಾರೆ. ಪ್ರಭಾಕರನ್ ದೀಪಾ ಅವರ ಮನೆಗೆ ಬಂದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೀಪಾ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್​​ ನೋಟ್ ಸಹ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಜೀವನ ಪರ್ಯಂತ ಅವರನ್ನು ಪ್ರೀತಿಸುತ್ತಲೇ ಇರುತ್ತೇನೆ ಎಂದು ಬರೆದಿದ್ದಾರೆ.

ದೀಪಾರ ಸಹೋದರ ದಿನೇಶ್ ಅವರು ನಿನ್ನೆ(ಸೆ.17) ಕೊಯಂಬೇಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಮೊದಲ ಹಂತದ ವಿಚಾರಣೆಯಲ್ಲಿ ದೀಪಾ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ. “ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದೆ. ಆದರೆ ಅದು ಸರಿಯಾಗಿ ನಡೆಯಲಿಲ್ಲ. ಹಾಗಾಗಿ ನಾನು ಇಹಲೋಕ ತ್ಯಜಿಸುತ್ತಿದ್ದೇನೆ. ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ” ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಾ ಹಲವು ತಮಿಳು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ. ಸಣ್ಣಪುಟ್ಟ ಪಾತ್ರಗಳಲ್ಲಾದರೂ ತನ್ನ ನಟನೆಯಿಂದ ಉತ್ತಮ ಮನ್ನಣೆ ಗಳಿಸಿದ್ದ ಅವರು ನಾಸರ್ ಅಭಿನಯದ ‘ವೈಥಾ’ ಸಿನಿಮಾ ಮೂಲಕ ನಾಯಕಿಯಾಗಿ ಪರಿಚಯಿಸಲ್ಪಟ್ಟರು.

andolanait

Recent Posts

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

5 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

13 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

43 mins ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

1 hour ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

3 hours ago