ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago