ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago