ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago