ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago