ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

8 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

10 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

11 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

13 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

16 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

17 hours ago