ಚಿತ್ರ ಮಂಜರಿ

ಮಹೇಶ್‌ ಬಾಬು ತಂದೆ ಕೃಷ್ಣ ಘಟ್ಟಮನೇನಿ ನಿಧನ

ಹೈದರಾಬಾದ್: ನಟ ಮಹೇಶ್​ ಬಾಬು ಅವರ ತಂದೆ, ಸೂಪರ್​ ಸ್ಟಾರ್​​ ಕೃಷ್ಣ ಘಟ್ಟಮನೇನಿ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ನಿಧನರಾದರು.

ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕೃಷ್ಣ ಘಟ್ಟಮನೇನಿ ಅವರ ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ ಸೀತಾರಾಮರಾಜು’ ಮುಂತಾದ ಚಿತ್ರಗಳು ಜನಪ್ರಿಯವಾಗಿದ್ದವು. ಬಾಂಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಅವಿಭಜಿತ ಆಂಧ್ರಪ್ರದೇಶದ ಜನರು ‘ಬಾಂಡ್ ಕೃಷ್ಣ’ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಹಲವು ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್ ಸ್ಟಾರ್​ ಆಗಿ ಮಿಂಚಿದವರು. 1965ರಲ್ಲಿ ಅವರು ನಟನೆಯ ಜರ್ನಿ ಆರಂಭಿಸಿದ್ದರು. ಪೌರಾಣಿಕ, ಐತಿಹಾಸಿಕ ಸೇರಿದಂತೆ ಹಲವು ಬಗೆಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅವರು ಅಭಿಮಾನಿಗಳ ಮನ ಗೆದ್ದರು. ಕೃಷ್ಣ ಅವರ ಅಂದಾಜು 25 ಸಿನಿಮಾಗಳಲ್ಲಿ ಮಹೇಶ್​ ಬಾಬು ಬಾಲ ನಟನಾಗಿ ಅಭಿನಯಿಸಿದ್ದರು.

ಸೆಪ್ಟೆಂಬರ್​ 28ರಂದು ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನ ಹೊಂದಿದರು. ಆ ಬಳಿಕ ಕೃಷ್ಣ ಅವರು ಖಿನ್ನತೆಗೆ ಒಳಗಾದರು ಎನ್ನಲಾಗಿದೆ. ಈ ವರ್ಷ ಆರಂಭದಲ್ಲಿ ಕೃಷ್ಣ ಅವರ ಹಿರಿಯ ಪುತ್ರ ರಮೇಶ್​ ಬಾಬು ಕೂಡ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು. ಒಟ್ಟಿನಲ್ಲಿ ಮಹೇಶ್​ ಬಾಬು ಕುಟುಂಬಕ್ಕೆ 2022ರಲ್ಲಿ ಒಂದರಮೇಲೊಂದು ಕಷ್ಟ ಎದುರಾಗುತ್ತಿದೆ. ಕೃಷ್ಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೃಷ್ಣ ತೇನಿಮನಸಲು, ಸಾಕ್ಷಿ, ಅಲ್ಲೂರಿ ಸೀತಾರಾಮರಾಜು, ಸಿಂಹಾಸನಂ, ಪಾಡಿಪಂಟಲು, ಪಚ್ಚನಿಸಂಸಾರಂ, ಪಂಡಂಟಿಕಾಪುರಂ, ದೇವಡು ಚೇಸಿನ ಮನಷುಲು, ಅಗ್ನಿಪರ್ವತಂ, ಕಂಚುಕಾಗಡ, ನಂಬರ್​ ಒನ್​, ಬ್ರಹ್ಮಾಸ್ತ್ರಂ, ಮೋಸಗಾಳ್ಳಕು ಮೋಸಗಾಡು, ಮುಂದಡುಗು, ಕಂಚುಕಾಗಡ, ವಾರಸುಡು, ಒಸೆಯ್ ರಾಮುಲಮ್ಮ, ಪ್ರಜಾರಾಜ್ಯಂ, ಗೂಢಚಾರಿ 116, ಏಜೆಂಟ್ ಗೋಪಿ, ಅಶ್ವತ್ಥಾಮ, ಇದ್ದರು ದೊಂಗಲು, ಮುಗ್ಗುರು ಕೊಡುಕಲು, ಅನ್ನದಮ್ಮುಲ ಸವಾಲ್​, ಕೈದಿ ರುದ್ರಯ್ಯ, ಈನಾಡು ಸೇರಿದಂತೆ 350ಕ್ಕೂ ಅಧಿಕ ಸಿನಿಮಾಗಳಲ್ಲಿ ಕೃಷ್ಣ ಅವರು ಬಣ್ಣ ಹಚ್ಚಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago