ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.
ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.
ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್ ಗಾಡ್”, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್,” “ಕಾರ್ಯಸ್ಥಾನ್,” “ಒನ್ ವೇ ಟಿಕೆಟ್”, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.
ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.
ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್ಸ್ಟಾಗ್ರಾಮ್ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್ ಮಾಡಿದ್ದರು.
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…