ಚಿತ್ರ ಮಂಜರಿ

ಮಲಯಾಳಂ ನಟಿ ರೆಂಜುಷಾ ಮೆನನ್‌ ಆತ್ಮಹತ್ಯೆ

ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್‌ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್‌ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.

ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್‌ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್‌ ಗಾಡ್”‌, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್‌,” “ಕಾರ್ಯಸ್ಥಾನ್‌,” “ಒನ್ ವೇ ಟಿಕೆಟ್”‌, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.

ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.

ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್‌ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್‌ ಮಾಡಿದ್ದರು.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

7 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

8 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

8 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

8 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

8 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

8 hours ago