ಚಿತ್ರ ಮಂಜರಿ

ಮಲಯಾಳಂ ನಟಿ ರೆಂಜುಷಾ ಮೆನನ್‌ ಆತ್ಮಹತ್ಯೆ

ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್‌ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್‌ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.

ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್‌ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್‌ ಗಾಡ್”‌, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್‌,” “ಕಾರ್ಯಸ್ಥಾನ್‌,” “ಒನ್ ವೇ ಟಿಕೆಟ್”‌, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.

ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.

ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್‌ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್‌ ಮಾಡಿದ್ದರು.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

38 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago