ಚಿತ್ರ ಮಂಜರಿ

ಮಲಯಾಳಂ ನಟಿ ರೆಂಜುಷಾ ಮೆನನ್‌ ಆತ್ಮಹತ್ಯೆ

ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್‌ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್‌ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.

ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್‌ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್‌ ಗಾಡ್”‌, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್‌,” “ಕಾರ್ಯಸ್ಥಾನ್‌,” “ಒನ್ ವೇ ಟಿಕೆಟ್”‌, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.

ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.

ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್‌ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್‌ ಮಾಡಿದ್ದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago