Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!