ಚಿತ್ರ ಮಂಜರಿ

‘ಸೀತಾ ಭಾರತದ ಮಗಳು’ ಡೈಲಾಗ್‌ಗೆ ‘ಆದಿಪುರುಷ್’ ವಿರುದ್ಧ ನೇಪಾಳದಲ್ಲಿ ಭಾರೀ ಆಕ್ರೋಶ

‘ಆದಿಪುರುಷ್‌’ ಸಿನಿಮಾವು 7000 ಪರದೆಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಈ ಹಿಂದೆ ಈ ಸಿನಿಮಾವು ಕೆಲ ವಿವಾದಗಳನ್ನು ಎದುರಿಸಿತ್ತು. ಈಗ ಈ ಸಿನಿಮಾ ವಿಚಾರವಾಗಿ ನೇಪಾಳದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ‘ಆದಿಪುರುಷ್‌’ ಸಿನಿಮಾದಲ್ಲಿ ಸೀತೆಯ ಕುರಿತಂತೆ ಇರುವ ಡೈಲಾಗ್‌ವೊಂದು ನೇಪಾಳದಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಟಿ ಮೇಯರ್ ಬಲೆನ್ ಶಾ ಸೋಶಿಯಲ್ ಮೀಡಿಯಾ ಪೋಸ್ಟ್
ಕಠ್ಮಂಡು ಮೆಟ್ರೊಪೊಲಿಟನ್ ಸಿಟಿ ಮೇಯರ್ ಬಲೆನ್ ಶಾ ಅವರು “ಆದಿಪುರುಷ್ ಸಿನಿಮಾದಲ್ಲಿ ಸೀತಾ ಡೈಲಾಗ್ ಬಗ್ಗೆ ಹೇಳಿದ್ದ ಡೈಲಾಗ್ ಸರಿ ಮಾಡಿಲ್ಲ ಎಂದರೆ ದೇಶದಲ್ಲಿ ಓಂ ರಾವುತ್ ಅವರ ಮುಂದಿನ ಸಿನಿಮಾಗಳು ಇಲ್ಲಿ ರಿಲೀಸ್ ಮಾಡೋದಿಲ್ಲ” ಎಂದು ಹೇಳಿದ್ದಾರೆ.

ಹಿಂದಿ ಸಿನಿಮಾ ರಿಲೀಸ್ ಮಾಡಲ್ಲ ಎಂದು ಎಚ್ಚರಿಕೆ
“ಜಾನಕಿ ಭಾರತದ ಮಗಳು ಎಂದು ಸಿನಿಮಾದಲ್ಲಿದೆ. ಇದು ಸತ್ಯವಲ್ಲ, ಜಾನಕಿ ನೇಪಾಳದ ಮಗಳು. ಆದಿಪುರುಷ್ ಸಿನಿಮಾದಲ್ಲಿರುವ ಈ ತಪ್ಪನ್ನು ಸರಿ ಮಾಡಿಲ್ಲ ಎಂದರೆ ಕಠ್ಮಂಡುವಿನಲ್ಲಿ ಹಿಂದಿ ಸಿನಿಮಾ ರಿಲೀಸ್ ಮಾಡೋದಿಲ್ಲ” ಎಂದು ಬಲೆನ್ ಶಾ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

ರಾಮಾಯಣದ ಪ್ರಕಾರ ಸೀತೆ ಹುಟ್ಟಿದ್ದು ಎಲ್ಲಿ?
ಇದೇ ಕಾರಣಕ್ಕೆ ನೇಪಾಳದ ಸೆನ್ಸಾರ್ ಬೋರ್ಡ್ ಕೂಡ ಈ ಚಿತ್ರವನ್ನು ಹೋಲ್ಡ್ ಮಾಡಿಡಲು ನಿರ್ಧಾರ ಮಾಡಿದೆಯಂತೆ. ಇನ್ನು ‘ಆದಿಪುರುಷ್ ಟ್ರೇಲರ್‌ನಲ್ಲಿ ಸೀತೆ ಭಾರತದ ಮಗಳು ಎಂದಿದೆ. ರಾಮಾಯಣದ ಪ್ರಕಾರ ನೇಪಾಳದ ಜನಕಪುರದಲ್ಲಿ ಸೀತೆ ಜನಿಸುತ್ತಾಳೆ. ಆಮೇಲೆ ಅವಳನ್ನು ರಾಮ ಮದುವೆ ಆಗುತ್ತಾನೆ’ ಎಂದಿದೆ.

ಯಾರು ಯಾವ ಚಿತ್ರದಲ್ಲಿ ನಟಿಸಿದ್ದಾರೆ?
‘ಆದಿಪುರುಷ್’ ಸಿನಿಮಾವನ್ನು ಸುಮಾರು 500 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀರಾಮನ ಪಾತ್ರವನ್ನು ಪ್ರಭಾಸ್, ಸೀತೆಯಾಗಿ ಕೃತಿ ಸನೋನ್, ರಾವಣನ ಪಾತ್ರವನ್ನು ನಟ ಸೈಫ್ ಅಲಿ ಖಾನ್, ಲಕ್ಷ್ಮಣನಾಗಿ ಸನ್ನಿ ಸಿಂಗ್, ಹನುಮಂತನಾಗಿ ದೇವದತ್ತ ನಾಗೆ ಅವರು ಕಾಣಿಸಿಕೊಂಡಿದ್ದಾರೆ. ಓಂ ರಾವುತ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅಜಯ್ ಅತುಲ್, ಸಚೇತ್ ಪರಂಪರಾ ಅವರು ಈ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಆದಿಪುರುಷ್ ಸಿನಿಮಾ ಹೇಗಿದೆಯಂತೆ?
ಈ ಸಿನಿಮಾದಲ್ಲಿ ಪ್ರಭಾಸ್, ಕೃತಿ ಸನೋನ್ ನಟನೆಗೆ ದೊಡ್ಡ ಮೆಚ್ಚುಗೆ ವ್ಯಕ್ತವಾಗಿದೆ. ಸಾಕಷ್ಟು ಜನರು ಈ ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ವಿಎಫ್‌ಎಕ್ಸ್ ಚೆನ್ನಾಗಿಲ್ಲ ಎಂದು ದೂರಿದ್ದಾರೆ.

ಫ್ರೀ ಟಿಕೆಟ್ ವಿತರಣೆ

ನಟ ರಾಮ್ ಚರಣ್ ತೇಜ, ರಣಬೀರ್ ಕಪೂರ್, ಅಭಿಷೇಕ್ ಅಗರ್‌ವಾಲ್ ಸೇರಿದಂತೆ ಕೆಲವರು 10 ಸಾವಿರ ಟಿಕೆಟ್‌ಗಳನ್ನು ಅಸಹಾಯಕರಿಗೆ, ಮಕ್ಕಳಿಗೆ ನೀಡುತ್ತೇವೆ ಎಂದು ಹೇಳಿದ್ದರು. ಈ ಸಿನಿಮಾ ಕಲೆಕ್ಷನ್ ಬಗ್ಗೆ ಭಾರೀ ಕುತೂಹಲ ಶುರುವಾಗಿದೆ.

ಬಿಗ್ ಬಾಸ್ ಪ್ರಥಮ್ ಪೋಸ್ಟ್ ಏನು?
“ನನ್ನ ನಿಶ್ಚಿತಾರ್ಥ ಅರ್ಥಪೂರ್ಣವಾಗಿರಲಿ ಎಂಬ ಕಾರಣಕ್ಕೆ 200 ಜನ ಅಶಕ್ತರನ್ನು ಗುರುತಿಸಿ ಆದಿಪುರುಷ್ ಟಿಕೆಟ್ ಕೊಡ್ತಾ ಇದೀನಿ, ರಾಮ ಬರೀ ದೇವರಷ್ಟೇ ಅಲ್ಲ..ನನ್ನ ಪೂರ್ವಜರು. ಭಾರತೀಯರೆಲ್ಲರಿಗೂ ರಾಮನೇ ಪೂರ್ವಜ, ರಾಮನೇ ದೇವರು, ಆದಿಪುರುಷ್ ನಮ್ಮ ಹೆಮ್ಮೆ. ದಯವಿಟ್ಟು ಥಿಯೇಟರ್‌ಲ್ಲಿ ನೋಡಿ. ಕೈಮುಗಿದು ಪ್ರಾರ್ಥನೆ.‌.” ಎಂದು ಒಳ್ಳೆ ಹುಡ್ಗ ಪ್ರಥಮ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

6 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

11 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

11 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

11 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

11 hours ago