ಚಿತ್ರ ಮಂಜರಿ

ಸೀತಾರಾಮ್‌ ನಿರ್ದೇಶನದ ಹೊಸ ಅಧ್ಯಾಯ ಮಯಾಮೃಗ ತೆರೆಗೆ ಬರಲಿದೆ

‘ಮಾಯಾಮೃಗ’ ಮಧ್ಯಾಹ್ನ ಕಳೆದು ಸಂಜೆ ಆಗುತ್ತಿರುವ ಹಾಗೆ ಜನ ಟೀ ಕುಡಿಯೋದನ್ನಾದರೂ ಮರೆತಾರು, ಮಾಯಾಮೃಗ ಸೀರಿಯಲ್ ಮಿಸ್ ಮಾಡಲ್ಲ ಅನ್ನೋ ಕಾಲವೊಂದಿತ್ತು. ಸೀಮಿತ ಧಾರಾವಾಹಿಗಳಷ್ಟೇ ಇದ್ದ ಆ ದಿನಗಳಲ್ಲಿ ಮನೆ ಮನೆಗಳಲ್ಲೂ ಸಂಜೆಯಾಗ್ತಿದ್ದ ಹಾಗೆ ‘ಮಯಾಮೃಗ ಮಾಯಾಮೃಗವೆಲ್ಲಿ… ‘ ಅನ್ನುವ ಶೀರ್ಷಿಕೆ ಗೀತೆಯ ಸೌಂಡ್‌. ಆಗಷ್ಟೇ ಶಾಲೆ ಮುಗಿಸಿ ಬಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯೋಮಿತಿಯ ಜನರನ್ನು ಟಿವಿ ಮುಂದೆ ಕೂರಿಸಿದ್ದ ಧಾರಾವಾಹಿ ಇದು. ಬದುಕಿನ ಕಷ್ಟ ಸುಖ, ಪರಂಪರೆ ಆಧುನಿಕತೆಯ ಮುಖಾಮುಖಿ, ಮಧ್ಯಮ ವರ್ಗ, ಮೇಲ್ಮಧ್ಯಮ ವರ್ಗದ ಜನರ ಮಾನಸಿಕ ತುಮುಲಗಳು ಇವನ್ನೆಲ್ಲ ಚಿಕ್ಕ ಮಕ್ಕಳಿಗೂ ಅರ್ಥ ಆಗೋ ಥರ ಕನ್ವೇ ಮಾಡುವಲ್ಲಿ ಟಿ ಎನ್ ಸೀತಾರಾಂ ಗೆದ್ದಿದ್ದರು. ಲಾಯರ್ ವೃತ್ತಿಯಲ್ಲಿ ಅಂಥಾ ಯಶಸ್ಸು ಸಾಧಿಸಲು ಸಾಧ್ಯವಾದಿದ್ದರೂ ಸೀರಿಯಲ್‌ನಲ್ಲಿ ಸಿಎಸ್‌ಪಿ ಯಾಗಿ ನುರಿತ ಲಾಯರ್ ಪಾತ್ರದಲ್ಲಿ ಮಿಂಚಿದ ಅವರನ್ನು ಒಂದಿಡೀ ಜನರೇಶನ್ ಇಂದು ಮಿಸ್ ಮಾಡುತ್ತಿದೆ. ತಮ್ಮ ಅಭಿಮಾನಿ ಬಳಗಕ್ಕೆ ಅಂದು ನಿರಾಸೆ ಮಾಡದಿದ್ದ ಟಿಎನ್‌ಎಸ್‌ ಇದೀಗ ಮತ್ತೆ ಹೊಸ ಮಾಯಾಮೃಗದ ಮೂಲಕ ವೀಕ್ಷಕರಿಗೆ ಮನೋರಂಜನೆ ನೀಡುವ ಜೊತೆಗೆ ಚಿಂತನೆಗೆ ಹಚ್ಚುವುದಕ್ಕೂ ಸಜ್ಜಾಗುತ್ತಿದ್ದಾರೆ.

‘ಮಾಯಾಮೃಗ’ ಧಾರಾವಾಹಿಯನ್ನು ಟಿ. ಎನ್. ಸೀತಾರಾಮ್ ಜೊತೆಗೆ ಪಿ. ಶೇಷಾದ್ರಿ ಮತ್ತು ನಾಗೇಂದ್ರ ಶಾ ನಿರ್ದೇಶಿಸಿದ್ದರು. ಇದನ್ನು ಮೊದಲ ಬಾರಿಗೆ ಡಿಡಿ ಚಂದನ ಟಿವಿ ವಾಹಿನಿಯಲ್ಲಿ 1998 ರಲ್ಲಿ ಪ್ರಸಾರ ಮಾಡಲಾಯಿತು. ಮತ್ತು ಇದು ಮಾರ್ಚ್ 10, 2014 ರಂದು ಝೀ ಕನ್ನಡ ದೂರದರ್ಶನ ವಾಹಿನಿಯಲ್ಲಿ ಮತ್ತೆ ಪ್ರಸಾರವಾಗಿತ್ತು. ಅಮೇಲೆ ಭೂಮಿಕಾ ಓಟಿಟಿಯಲ್ಲಿ ಬಿಡುಗಡೆಯಾಯ್ತು. ಜನ ಅಂದು ನೋಡಿದ್ದ ನೆನಪಲ್ಲೇ ಈ ಸೀರಿಯಲ್‌ನ ಮತ್ತೆ ಮತ್ತೆ ನೋಡಿದರು. ಆದರೆ ಅದದನ್ನೇ ಎಷ್ಟು ಸಲ ನೋಡಲು ಸಾಧ್ಯ, ಹಾಗಾಗಿ ಹೊಸ ಮಾಯಾಮೃಗದ ಸೃಷ್ಟಿಗೆ ಟಿ ಎನ್ ಸೀತಾರಾಮ್ ಮುಂದಾಗಿದ್ದಾರೆ.

ಈ ಧಾರಾವಾಹಿಯ ಯಶಸ್ಸಿನಿಂದ ಟಿ ಎನ್ ಸೀತಾರಾಮ್ ಮನೆ ಮಾತಾದರು. ಮುಂದೆಯೂ ಅವರದೇ ಸ್ಟೈಲಿನಲ್ಲಿ ಒಂದಿಷ್ಟು ಸೀರಿಯಲ್‌ಗಳನ್ನು ನಿರ್ದೇಶಿಸಿದರು. ಅವರ ನಿರ್ದೇಶನದ ಕೊನೆಯ ಧಾರಾವಾಹಿ ‘ಮಗಳು ಜಾನಕಿ’. ನಂತರ ಅವರು ವಿದ್ಯಾಭೂಷಣರ ಮಗಳನ್ನು ಮುಖ್ಯ ಪಾತ್ರಕ್ಕೆ ತಂದು ಸೀರಿಯಲ್‌ ಒಂದನ್ನು ನಿರ್ದೇಶಿಸಲು ಪ್ಲಾನ್ ಮಾಡಿದ್ದರು. ಆದರೆ ಕೋವಿಡ್ ಕಾರಣಕ್ಕೆ ಆ ಸೀರಿಯಲ್ ತೆರೆಗೆ ಬರಲೇ ಇಲ್ಲ. ಇದೀಗ ಮತ್ತೆ ಮಾಯಾಮೃಗದ ಹಿಂದೆ ಬಿದ್ದಿದ್ದಾರೆ.

andolana

Recent Posts

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

2 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

25 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

43 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

3 hours ago