ಚಿತ್ರ ಮಂಜರಿ

ಸೀತಾರಾಮ್‌ ನಿರ್ದೇಶನದ ಹೊಸ ಅಧ್ಯಾಯ ಮಯಾಮೃಗ ತೆರೆಗೆ ಬರಲಿದೆ

‘ಮಾಯಾಮೃಗ’ ಮಧ್ಯಾಹ್ನ ಕಳೆದು ಸಂಜೆ ಆಗುತ್ತಿರುವ ಹಾಗೆ ಜನ ಟೀ ಕುಡಿಯೋದನ್ನಾದರೂ ಮರೆತಾರು, ಮಾಯಾಮೃಗ ಸೀರಿಯಲ್ ಮಿಸ್ ಮಾಡಲ್ಲ ಅನ್ನೋ ಕಾಲವೊಂದಿತ್ತು. ಸೀಮಿತ ಧಾರಾವಾಹಿಗಳಷ್ಟೇ ಇದ್ದ ಆ ದಿನಗಳಲ್ಲಿ ಮನೆ ಮನೆಗಳಲ್ಲೂ ಸಂಜೆಯಾಗ್ತಿದ್ದ ಹಾಗೆ ‘ಮಯಾಮೃಗ ಮಾಯಾಮೃಗವೆಲ್ಲಿ… ‘ ಅನ್ನುವ ಶೀರ್ಷಿಕೆ ಗೀತೆಯ ಸೌಂಡ್‌. ಆಗಷ್ಟೇ ಶಾಲೆ ಮುಗಿಸಿ ಬಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯೋಮಿತಿಯ ಜನರನ್ನು ಟಿವಿ ಮುಂದೆ ಕೂರಿಸಿದ್ದ ಧಾರಾವಾಹಿ ಇದು. ಬದುಕಿನ ಕಷ್ಟ ಸುಖ, ಪರಂಪರೆ ಆಧುನಿಕತೆಯ ಮುಖಾಮುಖಿ, ಮಧ್ಯಮ ವರ್ಗ, ಮೇಲ್ಮಧ್ಯಮ ವರ್ಗದ ಜನರ ಮಾನಸಿಕ ತುಮುಲಗಳು ಇವನ್ನೆಲ್ಲ ಚಿಕ್ಕ ಮಕ್ಕಳಿಗೂ ಅರ್ಥ ಆಗೋ ಥರ ಕನ್ವೇ ಮಾಡುವಲ್ಲಿ ಟಿ ಎನ್ ಸೀತಾರಾಂ ಗೆದ್ದಿದ್ದರು. ಲಾಯರ್ ವೃತ್ತಿಯಲ್ಲಿ ಅಂಥಾ ಯಶಸ್ಸು ಸಾಧಿಸಲು ಸಾಧ್ಯವಾದಿದ್ದರೂ ಸೀರಿಯಲ್‌ನಲ್ಲಿ ಸಿಎಸ್‌ಪಿ ಯಾಗಿ ನುರಿತ ಲಾಯರ್ ಪಾತ್ರದಲ್ಲಿ ಮಿಂಚಿದ ಅವರನ್ನು ಒಂದಿಡೀ ಜನರೇಶನ್ ಇಂದು ಮಿಸ್ ಮಾಡುತ್ತಿದೆ. ತಮ್ಮ ಅಭಿಮಾನಿ ಬಳಗಕ್ಕೆ ಅಂದು ನಿರಾಸೆ ಮಾಡದಿದ್ದ ಟಿಎನ್‌ಎಸ್‌ ಇದೀಗ ಮತ್ತೆ ಹೊಸ ಮಾಯಾಮೃಗದ ಮೂಲಕ ವೀಕ್ಷಕರಿಗೆ ಮನೋರಂಜನೆ ನೀಡುವ ಜೊತೆಗೆ ಚಿಂತನೆಗೆ ಹಚ್ಚುವುದಕ್ಕೂ ಸಜ್ಜಾಗುತ್ತಿದ್ದಾರೆ.

‘ಮಾಯಾಮೃಗ’ ಧಾರಾವಾಹಿಯನ್ನು ಟಿ. ಎನ್. ಸೀತಾರಾಮ್ ಜೊತೆಗೆ ಪಿ. ಶೇಷಾದ್ರಿ ಮತ್ತು ನಾಗೇಂದ್ರ ಶಾ ನಿರ್ದೇಶಿಸಿದ್ದರು. ಇದನ್ನು ಮೊದಲ ಬಾರಿಗೆ ಡಿಡಿ ಚಂದನ ಟಿವಿ ವಾಹಿನಿಯಲ್ಲಿ 1998 ರಲ್ಲಿ ಪ್ರಸಾರ ಮಾಡಲಾಯಿತು. ಮತ್ತು ಇದು ಮಾರ್ಚ್ 10, 2014 ರಂದು ಝೀ ಕನ್ನಡ ದೂರದರ್ಶನ ವಾಹಿನಿಯಲ್ಲಿ ಮತ್ತೆ ಪ್ರಸಾರವಾಗಿತ್ತು. ಅಮೇಲೆ ಭೂಮಿಕಾ ಓಟಿಟಿಯಲ್ಲಿ ಬಿಡುಗಡೆಯಾಯ್ತು. ಜನ ಅಂದು ನೋಡಿದ್ದ ನೆನಪಲ್ಲೇ ಈ ಸೀರಿಯಲ್‌ನ ಮತ್ತೆ ಮತ್ತೆ ನೋಡಿದರು. ಆದರೆ ಅದದನ್ನೇ ಎಷ್ಟು ಸಲ ನೋಡಲು ಸಾಧ್ಯ, ಹಾಗಾಗಿ ಹೊಸ ಮಾಯಾಮೃಗದ ಸೃಷ್ಟಿಗೆ ಟಿ ಎನ್ ಸೀತಾರಾಮ್ ಮುಂದಾಗಿದ್ದಾರೆ.

ಈ ಧಾರಾವಾಹಿಯ ಯಶಸ್ಸಿನಿಂದ ಟಿ ಎನ್ ಸೀತಾರಾಮ್ ಮನೆ ಮಾತಾದರು. ಮುಂದೆಯೂ ಅವರದೇ ಸ್ಟೈಲಿನಲ್ಲಿ ಒಂದಿಷ್ಟು ಸೀರಿಯಲ್‌ಗಳನ್ನು ನಿರ್ದೇಶಿಸಿದರು. ಅವರ ನಿರ್ದೇಶನದ ಕೊನೆಯ ಧಾರಾವಾಹಿ ‘ಮಗಳು ಜಾನಕಿ’. ನಂತರ ಅವರು ವಿದ್ಯಾಭೂಷಣರ ಮಗಳನ್ನು ಮುಖ್ಯ ಪಾತ್ರಕ್ಕೆ ತಂದು ಸೀರಿಯಲ್‌ ಒಂದನ್ನು ನಿರ್ದೇಶಿಸಲು ಪ್ಲಾನ್ ಮಾಡಿದ್ದರು. ಆದರೆ ಕೋವಿಡ್ ಕಾರಣಕ್ಕೆ ಆ ಸೀರಿಯಲ್ ತೆರೆಗೆ ಬರಲೇ ಇಲ್ಲ. ಇದೀಗ ಮತ್ತೆ ಮಾಯಾಮೃಗದ ಹಿಂದೆ ಬಿದ್ದಿದ್ದಾರೆ.

andolana

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

1 hour ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

1 hour ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

7 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

7 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

7 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago