ಚಿತ್ರ ಮಂಜರಿ

ಸ್ಯಾಂಡಲ್ ವುಡ್ ನ ಮೀ ಟೂ: ಅವಕಾಶಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ : ನಟಿ ಆಶಿಕಾ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಸದ್ದು ಮಾಡುತ್ತಿದೆ. ಈಗಾಗಲೇ ನಟಿ ಶ್ರುತಿ ಹರಿಹರನ್ ಸೇರಿದಂತೆ ಕೆಲವು ನಟಿಯರು ಮೀ ಟೂ ಬಾಂಬ್ ಸಿಡಿಸಿದ್ದರು. ಇದೀಗ ಮತ್ತೋರ್ವ ಕನ್ನಡದ ನಟಿ ಮೀ ಟೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತನಗೂ ಕೆಟ್ಟ ಅನುಭವವಾಗಿತ್ತು ಎಂದು ಬಹಿರಂಗ ಪಡಿಸಿದ್ದಾರೆ. ಸ್ಯಾಂಡಲ್ ವುಡ್ ನ ಕರಾಳ ಮುಖ ಬಿಚ್ಚಿಟ್ಟ ನಟಿ ಮತ್ಯಾರು ಅಲ್ಲ ಬಾ ಬಾರೋ ರಸಿಕ ಖ್ಯಾತಿಯ ಆಶಿತಾ. ಅನೇಕ ಸಿನಿಮಾಗಳಲ್ಲಿ ಮಿಂಚಿರುವ ನಟಿ ಆಶಿತಾ ಸದ್ಯ ಚಿತ್ರರಂಗದಿಂದ ದೂರ ಇದ್ದಾರೆ. ಇದೀಗ ಅನೇಕ ವರ್ಷದ ಬಳಿಕ ಮತ್ತೆ ಕ್ಯಾಮರಾ ಮುಂದೆ ಬಂದಿರುವ ಆಶಿತಾ ಚಿತ್ರರಂಗದ ಕರಾಳಮುಖ ಬಹಿರಂಗ ಪಡಿಸಿದ್ದಾರೆ. ರಘುರಾಮ್ ಅವರ ಯೂಬ್ಯೂಬ್ ವಾಹಿನಿ ಜೊತೆ ಮಾತನಾಡಿದ ನಟಿ ಆಶಿತಾ ಸಾಕಷ್ಟು ವಿಚಾರಗಳನ್ನ ರಿವೀಲ್ ಮಾಡಿದ್ದಾರೆ. ಸಿನಿಮಾರಂಗದಿಂದ ದೂರ ಉಳಿಯಲು ಪ್ರಮುಖ ಕಾರಣ ಕೆಟ್ಟ ಅನುಭವವಾಗಿರುವುದು ಎಂದು ನೇರವಾಗಿ ಹೇಳಿದ್ದಾರೆ.

ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ ಎಂದಿರುವ ನಟಿ ಆಶಿತಾ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ಕೆಟ್ಟ ಅನುಭವಗಳು ಆದವು ಎಂದಿದ್ದಾರೆ. ಸಿನಿಮಾ ಪಯಣ ಪ್ರಾರಂಭ ಆದಾಗ ಅಂತ ಕೆಟ್ಟ ಸಮಸ್ಯೆ ಆಗಿಲ್ಲ. ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಬಳಿಕ ತನಗೆ ಕೆಟ್ಟ ಅನುಭವವಾಯಿತು ಎಂದು ಹೇಳಿದರು. ಅದಕ್ಕೆಲ್ಲ ನಾನು ಆಸ್ಪದ ಕೊಡಲಿಲ್ಲ. ನನಗೆ ಅಂತ ಅವಕಾಶ ಬೇಕಾಗಿರಲಿಲ್ಲ. ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತನ್ನೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ’ ಎಂದು ಆಶಿತಾ ಅನೇಕ ವರ್ಷಗಳ ಬಳಿಕ ಬಹಿರಂಗ ಪಡಿಸಿದ್ದಾರೆ.

‘ಸರ್, ಸರ್, ಸರ್ ಅನಬೇಕು, ಮೆಸೇಜ್ ಮಾಡಬೇಕು, ಹಾಯ್ ಅಂತ ಹೇಳ್ತಾ ಇರಬೇಕು ಇದನ್ನೆಲ್ಲ ನಾನು ಮಾಡ್ತಾ ಇರ್ಲಿಲ್ಲ ಅಂತ ಎಷ್ಟು ಕಷ್ಟ ಕೊಟ್ಟಿದ್ದಾರೆ ಎಂದರೆ ಅಷ್ಟು ಕೊಟ್ಟಿದ್ದಾರೆ. ಇದು ನನ್ನ ಜೀವನದಲ್ಲಿ ಪೀಕ್ ನಲ್ಲಿ ಇದ್ದಾಗ ಆಗಿದ್ದು. ದೊಡ್ಡ ದೊಡ್ಡ ಕಲಾವಿದರ ಜೊತೆ ಕೆಲಸ ಮಾಡಿದಾಗ ನನಗೆ ಏನು ಆಗಿರ್ಲಿಲ್ಲ. ಹೊಸಬರು ಜೊತೆ ಕೆಲಸ ಮಾಡುವಾಗ ಇಂಥ ಕೆಟ್ಟ ಅನುಭವವಾಗಿದೆ’ ಎಂದು ಹೇಳಿದ್ದಾರೆ.

ಈಗಲೂ ನಟಿಸುವ ಆಸಕ್ತಿ ಇದೆ ಎಂದಿರುವ ನಟಿ ಆಶಿತಾ ಉತ್ತಮ ಪಾತ್ರ ಸಿಕ್ಕರೆ ಬರುವುದಾಗಿ ಹೇಳಿದ್ದಾರೆ.
‘ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೂ, ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು’ ಎಂದು ಹೇಳಿದರು.

ರೋಡ್ ರೊಮಿಯೋ ಸಿನಿಮಾ ಬಳಿಕ ಆಶಿತಾ ಮತ್ತೆ ಸಿನಿಮಾ ಮಾಡಿಲ್ಲ. ಉತ್ತಮ ಪಾತ್ರ ಸಿಕ್ಕಿದರೂ ಸಹ ಆಶಿತಾ ಸಿನಿಮಾಗಳಲ್ಲಿ ನಟಸಿಲ್ಲ. ಸದ್ಯ ಸಿನಿಮಾರಂಗದಿಂದ ದೂರ ಇರುವ ಆಶಿತಾ ಮತ್ತೆ ಬಣ್ಣ ಹಚ್ಚುತ್ತಾರಾ, ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎಂದು ಕಾಯುತ್ತಿದ್ದಾರೆ.

andolana

Recent Posts

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

27 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

40 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

47 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

5 hours ago