ಚಿತ್ರ ಮಂಜರಿ

ಸ್ಯಾಂಡಲ್ ವುಡ್ ನ ಮೀ ಟೂ: ಅವಕಾಶಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ : ನಟಿ ಆಶಿಕಾ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಸದ್ದು ಮಾಡುತ್ತಿದೆ. ಈಗಾಗಲೇ ನಟಿ ಶ್ರುತಿ ಹರಿಹರನ್ ಸೇರಿದಂತೆ ಕೆಲವು ನಟಿಯರು ಮೀ ಟೂ ಬಾಂಬ್ ಸಿಡಿಸಿದ್ದರು. ಇದೀಗ ಮತ್ತೋರ್ವ ಕನ್ನಡದ ನಟಿ ಮೀ ಟೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತನಗೂ ಕೆಟ್ಟ ಅನುಭವವಾಗಿತ್ತು ಎಂದು ಬಹಿರಂಗ ಪಡಿಸಿದ್ದಾರೆ. ಸ್ಯಾಂಡಲ್ ವುಡ್ ನ ಕರಾಳ ಮುಖ ಬಿಚ್ಚಿಟ್ಟ ನಟಿ ಮತ್ಯಾರು ಅಲ್ಲ ಬಾ ಬಾರೋ ರಸಿಕ ಖ್ಯಾತಿಯ ಆಶಿತಾ. ಅನೇಕ ಸಿನಿಮಾಗಳಲ್ಲಿ ಮಿಂಚಿರುವ ನಟಿ ಆಶಿತಾ ಸದ್ಯ ಚಿತ್ರರಂಗದಿಂದ ದೂರ ಇದ್ದಾರೆ. ಇದೀಗ ಅನೇಕ ವರ್ಷದ ಬಳಿಕ ಮತ್ತೆ ಕ್ಯಾಮರಾ ಮುಂದೆ ಬಂದಿರುವ ಆಶಿತಾ ಚಿತ್ರರಂಗದ ಕರಾಳಮುಖ ಬಹಿರಂಗ ಪಡಿಸಿದ್ದಾರೆ. ರಘುರಾಮ್ ಅವರ ಯೂಬ್ಯೂಬ್ ವಾಹಿನಿ ಜೊತೆ ಮಾತನಾಡಿದ ನಟಿ ಆಶಿತಾ ಸಾಕಷ್ಟು ವಿಚಾರಗಳನ್ನ ರಿವೀಲ್ ಮಾಡಿದ್ದಾರೆ. ಸಿನಿಮಾರಂಗದಿಂದ ದೂರ ಉಳಿಯಲು ಪ್ರಮುಖ ಕಾರಣ ಕೆಟ್ಟ ಅನುಭವವಾಗಿರುವುದು ಎಂದು ನೇರವಾಗಿ ಹೇಳಿದ್ದಾರೆ.

ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ ಎಂದಿರುವ ನಟಿ ಆಶಿತಾ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ಕೆಟ್ಟ ಅನುಭವಗಳು ಆದವು ಎಂದಿದ್ದಾರೆ. ಸಿನಿಮಾ ಪಯಣ ಪ್ರಾರಂಭ ಆದಾಗ ಅಂತ ಕೆಟ್ಟ ಸಮಸ್ಯೆ ಆಗಿಲ್ಲ. ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಬಳಿಕ ತನಗೆ ಕೆಟ್ಟ ಅನುಭವವಾಯಿತು ಎಂದು ಹೇಳಿದರು. ಅದಕ್ಕೆಲ್ಲ ನಾನು ಆಸ್ಪದ ಕೊಡಲಿಲ್ಲ. ನನಗೆ ಅಂತ ಅವಕಾಶ ಬೇಕಾಗಿರಲಿಲ್ಲ. ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತನ್ನೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ’ ಎಂದು ಆಶಿತಾ ಅನೇಕ ವರ್ಷಗಳ ಬಳಿಕ ಬಹಿರಂಗ ಪಡಿಸಿದ್ದಾರೆ.

‘ಸರ್, ಸರ್, ಸರ್ ಅನಬೇಕು, ಮೆಸೇಜ್ ಮಾಡಬೇಕು, ಹಾಯ್ ಅಂತ ಹೇಳ್ತಾ ಇರಬೇಕು ಇದನ್ನೆಲ್ಲ ನಾನು ಮಾಡ್ತಾ ಇರ್ಲಿಲ್ಲ ಅಂತ ಎಷ್ಟು ಕಷ್ಟ ಕೊಟ್ಟಿದ್ದಾರೆ ಎಂದರೆ ಅಷ್ಟು ಕೊಟ್ಟಿದ್ದಾರೆ. ಇದು ನನ್ನ ಜೀವನದಲ್ಲಿ ಪೀಕ್ ನಲ್ಲಿ ಇದ್ದಾಗ ಆಗಿದ್ದು. ದೊಡ್ಡ ದೊಡ್ಡ ಕಲಾವಿದರ ಜೊತೆ ಕೆಲಸ ಮಾಡಿದಾಗ ನನಗೆ ಏನು ಆಗಿರ್ಲಿಲ್ಲ. ಹೊಸಬರು ಜೊತೆ ಕೆಲಸ ಮಾಡುವಾಗ ಇಂಥ ಕೆಟ್ಟ ಅನುಭವವಾಗಿದೆ’ ಎಂದು ಹೇಳಿದ್ದಾರೆ.

ಈಗಲೂ ನಟಿಸುವ ಆಸಕ್ತಿ ಇದೆ ಎಂದಿರುವ ನಟಿ ಆಶಿತಾ ಉತ್ತಮ ಪಾತ್ರ ಸಿಕ್ಕರೆ ಬರುವುದಾಗಿ ಹೇಳಿದ್ದಾರೆ.
‘ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೂ, ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು’ ಎಂದು ಹೇಳಿದರು.

ರೋಡ್ ರೊಮಿಯೋ ಸಿನಿಮಾ ಬಳಿಕ ಆಶಿತಾ ಮತ್ತೆ ಸಿನಿಮಾ ಮಾಡಿಲ್ಲ. ಉತ್ತಮ ಪಾತ್ರ ಸಿಕ್ಕಿದರೂ ಸಹ ಆಶಿತಾ ಸಿನಿಮಾಗಳಲ್ಲಿ ನಟಸಿಲ್ಲ. ಸದ್ಯ ಸಿನಿಮಾರಂಗದಿಂದ ದೂರ ಇರುವ ಆಶಿತಾ ಮತ್ತೆ ಬಣ್ಣ ಹಚ್ಚುತ್ತಾರಾ, ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎಂದು ಕಾಯುತ್ತಿದ್ದಾರೆ.

andolana

Recent Posts

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

9 mins ago

ಸರ್ಕಾರಕ್ಕೆ ಡೆಡ್‌ಲೈನ್‌ ನೀಡಿ ಮುಷ್ಕರ ವಾಪಾಸ್‌ ಪಡೆದ ಸಾರಿಗೆ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…

24 mins ago

ಮಾ.23ರಿಂದ ಏ.5 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…

34 mins ago

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

2 hours ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

2 hours ago