ಚಿತ್ರ ಮಂಜರಿ

ಸ್ಯಾಂಡಲ್ ವುಡ್ ನ ಮೀ ಟೂ: ಅವಕಾಶಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ : ನಟಿ ಆಶಿಕಾ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಸದ್ದು ಮಾಡುತ್ತಿದೆ. ಈಗಾಗಲೇ ನಟಿ ಶ್ರುತಿ ಹರಿಹರನ್ ಸೇರಿದಂತೆ ಕೆಲವು ನಟಿಯರು ಮೀ ಟೂ ಬಾಂಬ್ ಸಿಡಿಸಿದ್ದರು. ಇದೀಗ ಮತ್ತೋರ್ವ ಕನ್ನಡದ ನಟಿ ಮೀ ಟೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತನಗೂ ಕೆಟ್ಟ ಅನುಭವವಾಗಿತ್ತು ಎಂದು ಬಹಿರಂಗ ಪಡಿಸಿದ್ದಾರೆ. ಸ್ಯಾಂಡಲ್ ವುಡ್ ನ ಕರಾಳ ಮುಖ ಬಿಚ್ಚಿಟ್ಟ ನಟಿ ಮತ್ಯಾರು ಅಲ್ಲ ಬಾ ಬಾರೋ ರಸಿಕ ಖ್ಯಾತಿಯ ಆಶಿತಾ. ಅನೇಕ ಸಿನಿಮಾಗಳಲ್ಲಿ ಮಿಂಚಿರುವ ನಟಿ ಆಶಿತಾ ಸದ್ಯ ಚಿತ್ರರಂಗದಿಂದ ದೂರ ಇದ್ದಾರೆ. ಇದೀಗ ಅನೇಕ ವರ್ಷದ ಬಳಿಕ ಮತ್ತೆ ಕ್ಯಾಮರಾ ಮುಂದೆ ಬಂದಿರುವ ಆಶಿತಾ ಚಿತ್ರರಂಗದ ಕರಾಳಮುಖ ಬಹಿರಂಗ ಪಡಿಸಿದ್ದಾರೆ. ರಘುರಾಮ್ ಅವರ ಯೂಬ್ಯೂಬ್ ವಾಹಿನಿ ಜೊತೆ ಮಾತನಾಡಿದ ನಟಿ ಆಶಿತಾ ಸಾಕಷ್ಟು ವಿಚಾರಗಳನ್ನ ರಿವೀಲ್ ಮಾಡಿದ್ದಾರೆ. ಸಿನಿಮಾರಂಗದಿಂದ ದೂರ ಉಳಿಯಲು ಪ್ರಮುಖ ಕಾರಣ ಕೆಟ್ಟ ಅನುಭವವಾಗಿರುವುದು ಎಂದು ನೇರವಾಗಿ ಹೇಳಿದ್ದಾರೆ.

ಸಿನಿಮಾ ರಂಗದಿಂದ ದೂರವಾಗಿದ್ದಕ್ಕೆ ನನಗೇನೂ ಬೇಸರವಿಲ್ಲ ಎಂದಿರುವ ನಟಿ ಆಶಿತಾ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ಮೇಲೂ ಕೆಟ್ಟ ಅನುಭವಗಳು ಆದವು ಎಂದಿದ್ದಾರೆ. ಸಿನಿಮಾ ಪಯಣ ಪ್ರಾರಂಭ ಆದಾಗ ಅಂತ ಕೆಟ್ಟ ಸಮಸ್ಯೆ ಆಗಿಲ್ಲ. ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಬಳಿಕ ತನಗೆ ಕೆಟ್ಟ ಅನುಭವವಾಯಿತು ಎಂದು ಹೇಳಿದರು. ಅದಕ್ಕೆಲ್ಲ ನಾನು ಆಸ್ಪದ ಕೊಡಲಿಲ್ಲ. ನನಗೆ ಅಂತ ಅವಕಾಶ ಬೇಕಾಗಿರಲಿಲ್ಲ. ಆ ನಿರ್ದೇಶಕರ ಹೆಸರು ಹೇಳುವುದು ಬೇಡ, ಅವರು ತನ್ನೊಂದಿಗೆ ನನ್ನನ್ನು ಸಲುಗೆಯಿಂದ ಇರಲು ಹೇಳಿದರು. ಅದಕ್ಕೆ ಒಪ್ಪದಾಗ ಏನಲ್ಲ ಅವಮಾನಗಳನ್ನು ಮಾಡಿದ್ದರು. ಟೇಕ್ ಚೆನ್ನಾಗಿ ಬಂದರೂ, ಮತ್ತೆ ರಿಟೇಕ್ ಮಾಡಿಸುತ್ತಿದ್ದರು. ಇದೆಲ್ಲದರಿಂದ ನಾನು ಬೇಸತ್ತಿದ್ದೆ’ ಎಂದು ಆಶಿತಾ ಅನೇಕ ವರ್ಷಗಳ ಬಳಿಕ ಬಹಿರಂಗ ಪಡಿಸಿದ್ದಾರೆ.

‘ಸರ್, ಸರ್, ಸರ್ ಅನಬೇಕು, ಮೆಸೇಜ್ ಮಾಡಬೇಕು, ಹಾಯ್ ಅಂತ ಹೇಳ್ತಾ ಇರಬೇಕು ಇದನ್ನೆಲ್ಲ ನಾನು ಮಾಡ್ತಾ ಇರ್ಲಿಲ್ಲ ಅಂತ ಎಷ್ಟು ಕಷ್ಟ ಕೊಟ್ಟಿದ್ದಾರೆ ಎಂದರೆ ಅಷ್ಟು ಕೊಟ್ಟಿದ್ದಾರೆ. ಇದು ನನ್ನ ಜೀವನದಲ್ಲಿ ಪೀಕ್ ನಲ್ಲಿ ಇದ್ದಾಗ ಆಗಿದ್ದು. ದೊಡ್ಡ ದೊಡ್ಡ ಕಲಾವಿದರ ಜೊತೆ ಕೆಲಸ ಮಾಡಿದಾಗ ನನಗೆ ಏನು ಆಗಿರ್ಲಿಲ್ಲ. ಹೊಸಬರು ಜೊತೆ ಕೆಲಸ ಮಾಡುವಾಗ ಇಂಥ ಕೆಟ್ಟ ಅನುಭವವಾಗಿದೆ’ ಎಂದು ಹೇಳಿದ್ದಾರೆ.

ಈಗಲೂ ನಟಿಸುವ ಆಸಕ್ತಿ ಇದೆ ಎಂದಿರುವ ನಟಿ ಆಶಿತಾ ಉತ್ತಮ ಪಾತ್ರ ಸಿಕ್ಕರೆ ಬರುವುದಾಗಿ ಹೇಳಿದ್ದಾರೆ.
‘ಸಿನಿಮಾ ರಂಗದಲ್ಲಿ ಗುರುತಿಸಿಕೊಂಡ ನನ್ನಂತವಳಿಗೆ ಹೀಗಾದರೂ, ಹೊಸ ಹುಡುಗಿಯರು ಇನ್ನೆಷ್ಟು ಸಂಕಟ ಪಟ್ಟಿದ್ದಾರೋ ಗೊತ್ತಿಲ್ಲ. ಈಗಲೂ ನನಗೆ ನಟಿಸುವುದಕ್ಕೆ ಆಸಕ್ತಿ ಇದೆ. ಆದರೆ, ನನಗೆ ಟೀಮ್ ಇಷ್ಟವಾಗಬೇಕು ಮತ್ತು ನನಗೊಪ್ಪುವ ಪಾತ್ರ ಸಿಗಬೇಕು’ ಎಂದು ಹೇಳಿದರು.

ರೋಡ್ ರೊಮಿಯೋ ಸಿನಿಮಾ ಬಳಿಕ ಆಶಿತಾ ಮತ್ತೆ ಸಿನಿಮಾ ಮಾಡಿಲ್ಲ. ಉತ್ತಮ ಪಾತ್ರ ಸಿಕ್ಕಿದರೂ ಸಹ ಆಶಿತಾ ಸಿನಿಮಾಗಳಲ್ಲಿ ನಟಸಿಲ್ಲ. ಸದ್ಯ ಸಿನಿಮಾರಂಗದಿಂದ ದೂರ ಇರುವ ಆಶಿತಾ ಮತ್ತೆ ಬಣ್ಣ ಹಚ್ಚುತ್ತಾರಾ, ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎಂದು ಕಾಯುತ್ತಿದ್ದಾರೆ.

andolana

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago