ಬೆಂಗಳೂರು : ನಟಿ, ಕಾಂಗ್ರೆಸ್ ರಾಜಕಾರಣಿ ರಮ್ಯ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ನಟಿ ʼನಮ್ಮ ಊರಿನಲ್ಲಿ ಭೇಟಿಯಾಗೋಣ’ ಎಂದು ಪತ್ರಕರ್ತೆ ಚಿತ್ರ ಸುಬ್ರಮಣಿಯಮ್ ಗೆ ಪ್ರತಿಕ್ರಿಯಿಸಿದ್ದಾರೆ.
ಜಿನೇವಾ ಪ್ರವಾಸದಲ್ಲಿರುವ ನಟಿ ರಮ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು.
ಈ ಸುದ್ದಿ ಹಬ್ಬುತ್ತಿದ್ದಂತೆ ನಟಿ ರಮ್ಯ ಜೊತೆ ಆಹಾರ ಸೇವಿಸುವ ಫೋಟೋವನ್ನು ಹಾಕಿದ್ದ ಪತ್ರಕರ್ತೆ ಚಿತ್ರ ಸುಬ್ರಮಣಿಯಮ್ ”ಜಿನೀವಾದಲ್ಲಿ ಭೋಜನಕ್ಕೆ ಅತ್ಯಂತ ಪ್ರತಿಭಾವಂತ ಮತ್ತು ಸೌಮ್ಯ ಮಹಿಳೆ ದಿವ್ಯಸ್ಪಂದನಾ ಅವರ ಭೇಟಿಯಾಯಿತು. ಬೆಂಗಳೂರಿನ ಮೇಲಿನ ಪ್ರೀತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದೆವು” ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯ, “ನಮ್ಮ ಊರಿನಲ್ಲಿ ಭೇಟಿಯಾಗುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…