ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.
ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತನ್ನ ತಾಯಿ ಕೊಟ್ಟ ಹುಲಿ ಉಗುರಿನ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…