ಚಿತ್ರ ಮಂಜರಿ

ಮನಸ್ಸು ದಿಗ್ಬಂಧನ ಹಾಕಿಕೊಂಡಿದೆ : ನಟ ಜಗ್ಗೇಶ್

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.

ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತನ್ನ ತಾಯಿ ಕೊಟ್ಟ ಹುಲಿ ಉಗುರಿನ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

 

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

6 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

6 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

7 hours ago