ಚಿತ್ರ ಮಂಜರಿ

ಥಿಯೇಟರ್‌ ಒಳಗೆ ಅಭಿಮಾನಿಗಳ ದುರ್ವರ್ತನೆ: ಪಟಾಕಿ ಸಿಡಿಸಬೇಡಿ ಎಂದ ಸಲ್ಮಾನ್‌ ಖಾನ್‌

ಬಾಲಿವುಡ್‌ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಿನಿಮಾ ಟೈಗರ್‌-3 ಭಾನುವಾರ (ನ.12) ದಂದು ರಿಲೀಸ್‌ ಅಗಿದೆ. ಅಭಿಮಾನಿಗಳ ಕ್ರೇಜ್‌ ಹೇಳ ತೀರದು, ಸಲ್ಲುವನ್ನು ಭಾಯ್‌ ರೀತಿಯಲ್ಲಿ ದೇಶಾದ್ಯಂತ ಅಭಿಮಾನಿಗಳು ಬರಮಾಡಿಕೊಳ್ಳುತ್ತಿದ್ದಾರೆ.

ಭಾನುವಾರ ರಿಲೀಸ್‌ ಆದ ಟೈಗರ್-‌3ಗೆ ಅದ್ದೂರಿ ವೆಲ್‌ಕಮ್‌ ದೊರೆಯಿತು. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ಬಂದರೂ ಅಭಿಮಾನಿಗಳಿಗೆ ಮೆಚ್ಚಿನ ಸಿನಿಮಾ ಆಗಿದ್ದು ಸುಳ್ಳಲ್ಲ. ಅಭಿಮಾನಿಗಳ ಅಭಿಮಾನ ಅತಿರೇಕಕ್ಕೆ ತಲುಪಿದ್ದು, ಸಲ್ಲು ಕಟೌಟ್‌ಗೆ ಹಾರ, ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಾ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರಮಂದಿರ ಒಳಗಡೆ ಪಟಾಕಿ ಸಿಡಿಸಿದ್ದು, ಸಲ್ಲು ಅಭಿಮಾನಿಗಳ ದುರ್ವರ್ತನೆಯಿಂದ ಚಿತ್ರ ವೀಕ್ಷಣೆಗೆ ಬಂದಿದ್ದವರು ಕಕ್ಕಾಬಿಕ್ಕಿಯಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಪಟಾಕಿ ಸಿಡಿದಿದ್ದು, ವೀಕ್ಷಕರೆಲ್ಲಾ ಎದ್ನೊ ಬಿದ್ನೋ ಎಂದು ಥಿಯೇಟರ್‌ನಿಂದ ಕಾಲ್ಕಿತ್ತಿದ್ದಾರೆ.

ಈ ಘಟನೆಯಿಂದ ಹಲವಾರು ಜನರು ಕಾಲ್ತುಳಿತಕ್ಕೆ ಒಳಗಾಗಿದ್ದು, ಹಲವಾರು ಮಂದಿಗೆ ಗಾಯಗಳಾಗಿದೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರ ಚಿತ್ರಮಂದಿರದಲ್ಲಿ ನಡೆದ ಘಟನೆ: ಸಲ್ಲು ಭಾಯ್‌ ಎಂಟ್ರಿ ವೇಳೆ ಸ್ಕ್ರೀನ್‌ ನ ಒಂದು ಬದಿಯಲ್ಲಿ ಪಟಾಕಿ ಸಿಡಿಸಿದ್ದಾರೆ. ಚಿತ್ರಮಂದಿರ ತುಂಬೆಲ್ಲಾ ರಾಶಿ ರಾಶಿ ಕಸ, ದಟ್ಟ ಹೊಗೆ ಆವರಿಸಿದ್ದು ಕೆಲಕಾಲ ಆತಂಕ ಮನೆಮಾಡಿತ್ತು. ಅಂದಹಾಗೆ ಈ ಘಟನೆ ನಡೆದದ್ದು, ಮಹಾರಾಷ್ಟ್ರದ ನಾಸಿಕ್‌ನ ಮಾಲೇಗಾಂವ್‌ ಮೋಹನ್‌ ಚಿತ್ರಮಂದಿರದಲ್ಲಿ.

ಸಲ್ಲು ಫ್ಯಾನ್ಸ್‌ ವಿರುದ್ಧ ಖಂಡನೆ: ಸೋಷಿಯಲ್‌ ಮೀಡಿಯಾದಲ್ಲಿ ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಸಲ್ಲು ಫ್ಯಾನ್ಸ್‌ರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಿತಿ ಮೀರಿದ ಹುಚ್ಚುತನ ಇದಾಗಿದ್ದು, ಚಿತ್ರಮಂದಿರದಲ್ಲಿ ಇವರಿಗೆ ಪಟಾಕಿ ಹಚ್ಚಲು ಅನುಮತಿ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಸಲ್ಲು ರಿಯಾಕ್ಷನ್‌ : “ನನ್ನ ಎಲ್ಲಾ ಅಭಿಮಾನಿಗಳಿಗೆ ಬೆಂಕಿ ಪಟಾಕಿಗಳನ್ನು ಆಡಿಟೋರಿಯಂ ಒಳಗೆ ತೆಗೆದುಕೊಂಡು ಹೋಗಬೇಡಿ ಎಂದು ವಿನಂತಿಸುತ್ತೇನೆ ಬೆಂಕಿಯಿಂದ ದೊಡ್ಡ ಅನಾಹುತ ಆಗಬಹುದು ಮತ್ತು ಇದರಿಂದಾಗಿ ನಿಮ್ಮ ಮತ್ತು ಇತರರ ಜೀವಕ್ಕೆ ಅಪಾಯವಿದೆ. ಚಿತ್ರಮಂದಿರದೊಳಗೆ ಪಟಾಕಿಗಳನ್ನು ತೆಗೆದುಕೊಂಡು ಹೋಗಲು ಬಿಡಬೇಡಿ ಮತ್ತು ಪ್ರವೇಶ ದ್ವಾರದಲ್ಲಿ ಸೆಕ್ಯೂರಿಟಿ ನಿಲ್ಲಿಸುವಂತೆ ಥಿಯೇಟರ್ ಮಾಲೀಕರಿಗೆ ನನ್ನ ವಿನಂತಿ.  ಚಿತ್ರವನ್ನು ಆನಂದಿಸಿ ಆದರೆ ದಯವಿಟ್ಟು ಇದನ್ನು ತಪ್ಪಿಸಿ” ಎಂದು ಅಭಿಮಾನಿಗಳಲ್ಲಿ ಸಲ್ಲು ಮನವಿ ಮಾಡಿದ್ದಾರೆ.

ಟೈಗರ್‌-3 ಚಿತ್ರವನ್ನು ಮನೀಷ್‌ ಶರ್ಮಾ ನಿರ್ದೇಶಿಸಿದ್ದು, ಯಶ್‌ರಾಜ್‌ ಫಿಲಂಸ್‌ ನಿರ್ಮಾಣ ಮಾಡಿದೆ. ಸಲ್ಮಾನ್‌ ಖಾನ್‌, ಕತ್ರಿನಾ ಕೈಫ್‌, ಇಮ್ರಾನ್‌ ಹಶ್ಮಿ, ರಿದ್ಧಿ ಡೋಗ್ರಾ, ಅಶುತೋಷ್‌ ರಾಣಾ, ರೇವತಿ, ವಿಶೇಷ ಪಾತ್ರದಲ್ಲಿ ಶಾರುಖ್‌ ಖಾನ್‌, ಹೃತಿಕ್‌ ರೋಷನ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

15 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago