ಚಿತ್ರ ಮಂಜರಿ

ಥಿಯೇಟರ್‌ ಒಳಗೆ ಅಭಿಮಾನಿಗಳ ದುರ್ವರ್ತನೆ: ಪಟಾಕಿ ಸಿಡಿಸಬೇಡಿ ಎಂದ ಸಲ್ಮಾನ್‌ ಖಾನ್‌

ಬಾಲಿವುಡ್‌ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಿನಿಮಾ ಟೈಗರ್‌-3 ಭಾನುವಾರ (ನ.12) ದಂದು ರಿಲೀಸ್‌ ಅಗಿದೆ. ಅಭಿಮಾನಿಗಳ ಕ್ರೇಜ್‌ ಹೇಳ ತೀರದು, ಸಲ್ಲುವನ್ನು ಭಾಯ್‌ ರೀತಿಯಲ್ಲಿ ದೇಶಾದ್ಯಂತ ಅಭಿಮಾನಿಗಳು ಬರಮಾಡಿಕೊಳ್ಳುತ್ತಿದ್ದಾರೆ.

ಭಾನುವಾರ ರಿಲೀಸ್‌ ಆದ ಟೈಗರ್-‌3ಗೆ ಅದ್ದೂರಿ ವೆಲ್‌ಕಮ್‌ ದೊರೆಯಿತು. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ಬಂದರೂ ಅಭಿಮಾನಿಗಳಿಗೆ ಮೆಚ್ಚಿನ ಸಿನಿಮಾ ಆಗಿದ್ದು ಸುಳ್ಳಲ್ಲ. ಅಭಿಮಾನಿಗಳ ಅಭಿಮಾನ ಅತಿರೇಕಕ್ಕೆ ತಲುಪಿದ್ದು, ಸಲ್ಲು ಕಟೌಟ್‌ಗೆ ಹಾರ, ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಾ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರಮಂದಿರ ಒಳಗಡೆ ಪಟಾಕಿ ಸಿಡಿಸಿದ್ದು, ಸಲ್ಲು ಅಭಿಮಾನಿಗಳ ದುರ್ವರ್ತನೆಯಿಂದ ಚಿತ್ರ ವೀಕ್ಷಣೆಗೆ ಬಂದಿದ್ದವರು ಕಕ್ಕಾಬಿಕ್ಕಿಯಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಪಟಾಕಿ ಸಿಡಿದಿದ್ದು, ವೀಕ್ಷಕರೆಲ್ಲಾ ಎದ್ನೊ ಬಿದ್ನೋ ಎಂದು ಥಿಯೇಟರ್‌ನಿಂದ ಕಾಲ್ಕಿತ್ತಿದ್ದಾರೆ.

ಈ ಘಟನೆಯಿಂದ ಹಲವಾರು ಜನರು ಕಾಲ್ತುಳಿತಕ್ಕೆ ಒಳಗಾಗಿದ್ದು, ಹಲವಾರು ಮಂದಿಗೆ ಗಾಯಗಳಾಗಿದೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರ ಚಿತ್ರಮಂದಿರದಲ್ಲಿ ನಡೆದ ಘಟನೆ: ಸಲ್ಲು ಭಾಯ್‌ ಎಂಟ್ರಿ ವೇಳೆ ಸ್ಕ್ರೀನ್‌ ನ ಒಂದು ಬದಿಯಲ್ಲಿ ಪಟಾಕಿ ಸಿಡಿಸಿದ್ದಾರೆ. ಚಿತ್ರಮಂದಿರ ತುಂಬೆಲ್ಲಾ ರಾಶಿ ರಾಶಿ ಕಸ, ದಟ್ಟ ಹೊಗೆ ಆವರಿಸಿದ್ದು ಕೆಲಕಾಲ ಆತಂಕ ಮನೆಮಾಡಿತ್ತು. ಅಂದಹಾಗೆ ಈ ಘಟನೆ ನಡೆದದ್ದು, ಮಹಾರಾಷ್ಟ್ರದ ನಾಸಿಕ್‌ನ ಮಾಲೇಗಾಂವ್‌ ಮೋಹನ್‌ ಚಿತ್ರಮಂದಿರದಲ್ಲಿ.

ಸಲ್ಲು ಫ್ಯಾನ್ಸ್‌ ವಿರುದ್ಧ ಖಂಡನೆ: ಸೋಷಿಯಲ್‌ ಮೀಡಿಯಾದಲ್ಲಿ ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಸಲ್ಲು ಫ್ಯಾನ್ಸ್‌ರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಮಿತಿ ಮೀರಿದ ಹುಚ್ಚುತನ ಇದಾಗಿದ್ದು, ಚಿತ್ರಮಂದಿರದಲ್ಲಿ ಇವರಿಗೆ ಪಟಾಕಿ ಹಚ್ಚಲು ಅನುಮತಿ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಸಲ್ಲು ರಿಯಾಕ್ಷನ್‌ : “ನನ್ನ ಎಲ್ಲಾ ಅಭಿಮಾನಿಗಳಿಗೆ ಬೆಂಕಿ ಪಟಾಕಿಗಳನ್ನು ಆಡಿಟೋರಿಯಂ ಒಳಗೆ ತೆಗೆದುಕೊಂಡು ಹೋಗಬೇಡಿ ಎಂದು ವಿನಂತಿಸುತ್ತೇನೆ ಬೆಂಕಿಯಿಂದ ದೊಡ್ಡ ಅನಾಹುತ ಆಗಬಹುದು ಮತ್ತು ಇದರಿಂದಾಗಿ ನಿಮ್ಮ ಮತ್ತು ಇತರರ ಜೀವಕ್ಕೆ ಅಪಾಯವಿದೆ. ಚಿತ್ರಮಂದಿರದೊಳಗೆ ಪಟಾಕಿಗಳನ್ನು ತೆಗೆದುಕೊಂಡು ಹೋಗಲು ಬಿಡಬೇಡಿ ಮತ್ತು ಪ್ರವೇಶ ದ್ವಾರದಲ್ಲಿ ಸೆಕ್ಯೂರಿಟಿ ನಿಲ್ಲಿಸುವಂತೆ ಥಿಯೇಟರ್ ಮಾಲೀಕರಿಗೆ ನನ್ನ ವಿನಂತಿ.  ಚಿತ್ರವನ್ನು ಆನಂದಿಸಿ ಆದರೆ ದಯವಿಟ್ಟು ಇದನ್ನು ತಪ್ಪಿಸಿ” ಎಂದು ಅಭಿಮಾನಿಗಳಲ್ಲಿ ಸಲ್ಲು ಮನವಿ ಮಾಡಿದ್ದಾರೆ.

ಟೈಗರ್‌-3 ಚಿತ್ರವನ್ನು ಮನೀಷ್‌ ಶರ್ಮಾ ನಿರ್ದೇಶಿಸಿದ್ದು, ಯಶ್‌ರಾಜ್‌ ಫಿಲಂಸ್‌ ನಿರ್ಮಾಣ ಮಾಡಿದೆ. ಸಲ್ಮಾನ್‌ ಖಾನ್‌, ಕತ್ರಿನಾ ಕೈಫ್‌, ಇಮ್ರಾನ್‌ ಹಶ್ಮಿ, ರಿದ್ಧಿ ಡೋಗ್ರಾ, ಅಶುತೋಷ್‌ ರಾಣಾ, ರೇವತಿ, ವಿಶೇಷ ಪಾತ್ರದಲ್ಲಿ ಶಾರುಖ್‌ ಖಾನ್‌, ಹೃತಿಕ್‌ ರೋಷನ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago